ಸಿಎಂ ಆಗಿ ನಾನು ತಾರತಮ್ಯ ಮಾಡಲ್ಲ, ಆದರೆ ಒಬ್ಬ ಯೋಗಿ ಹಾಗೂ ಹಿಂದೂವಾಗಿ ಮಸೀದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ: ಯೋಗಿ ಆದಿತ್ಯನಾಥ್‌ -Vishwanews24

ಅಯೋಧ್ಯೆ: ಸಿಎಂ ಆಗಿ ನಾನು ತಾರತಮ್ಯ ಮಾಡಲ್ಲ, ಹಿಂದೂವಾಗಿ ಅಯೋಧ್ಯೆಯ ಮಸೀದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಖಡಕ್‌ ಆಗಿ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನಡೆದಿದ್ದು, ಇದನ್ನ ಸುಸೂತ್ರವಾಗಿ ನಡೆಸುವಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಪಾತ್ರ ಕೂಡ ಬಹುಮುಖ್ಯವಾಗಿದೆ.

ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಜೊತೆಗಿದ್ದ ಸಿಎಂ ಯೋಗಿ ಆದಿತ್ಯನಾಥ್‌, ಸಂಪೂರ್ಣ ಧಾರ್ಮಿಕ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು. ಈ ಹಿನ್ನೆಲೆ ಈ ರೀತಿಯ ಮಸೀದಿ ಕಾರ್ಯಕ್ರಮ ಅಯೋಧ್ಯೆಯಲ್ಲಿ ಮುಸ್ಲಿಂ ಸಮುದಾಯದವರು ನಡೆಸಿದರೆ ತಾವು ಪಾಲ್ಗೊಳ್ಳುತ್ತೀರಾ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ.

“ಮಸೀದಿಯ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ನನ್ನನ್ನ ಆಹ್ವಾನಿಸುತ್ತಾರೆ ಎಂದು ನಿಮಗೆ ಅನಿಸುತ್ತಿದೆಯಾ? ಎಂದು ಪ್ರಶ್ನಿಸಿದ ಸಿಎಂ ಯೋಗಿ, ನನ್ನನ್ನ ಆಹ್ವಾನಿಸುವ ಬಗ್ಗೆ ನನಗೆ ಸಮಸ್ಯೆಯಾಗುವುದಕ್ಕಿಂತ ಜಾಸ್ತಿ ಅವರಿಗೆ ಸಮಸ್ಯೆಯಾಗುತ್ತಿರಬಹುದು ಎಂದು ರಾಷ್ಟ್ರೀಯ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

“ಒಬ್ಬ ಮುಖ್ಯಮಂತ್ರಿಯಾಗಿ ನಾನು ಜಾತಿ, ಧರ್ಮದ ಬಗ್ಗೆ ತಾರತಮ್ಯ ಮಾಡುವಂತಿಲ್ಲ. ಆದರೆ ಒಬ್ಬ ಯೋಗಿ ಹಾಗೂ ಹಿಂದೂವಾಗಿ ನಾನು ಅಂತಹ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಯಾಕೆಂದರೆ ಅದು ನನ್ನ ಧರ್ಮವನ್ನ ಪಾಲಿಸುವ ನನ್ನ ಹಕ್ಕು ಆಗಿದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಮುಸ್ಲಿಂ ಸಮುದಾಯದಿಂದ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಇಕ್ಬಾಲ್‌ ಅನ್ಸಾರಿ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್‌, “ಇಕ್ಬಾಲ್‌ ಅನ್ಸಾರಿ ಸುಪ್ರೀಂಕೋರ್ಟ್‌ನ ತೀರ್ಪನ್ನ ಸ್ವಾಗತಿಸಿದಕ್ಕೆ ಧನ್ಯವಾದಗಳು. ಅವರಿಂದ ಇತರರು ಪಾಲಿಸುವ ವಿಚಾರ ಅನೇಕವಿದೆ. ರಾಮಜನ್ಮ ಸ್ಥಳ ಪ್ರಕರಣದ ಸಂಬಂಧ ಕೋರ್ಟ್‌ ಮೆಟ್ಟಿಲೇರಿ ಹೋರಾಟ ನಡೆಸಿದ್ದರು ಅವರಿಗೆ ಅಯೋಧ್ಯೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ.

ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರತಿಬಿಂಬವಾಗಿದೆ” ಎಂದು ಹೇಳಿದ ಯೋಗಿ, ಎಲ್ಲಾದರೂ ಹಿಂದೂ ವ್ಯಕ್ತಿಯೊಬ್ಬ ಪಾಕಿಸ್ತಾನ ಅಥವಾ ಅಫಘಾನಿಸ್ತಾನದಲ್ಲಿ ದೇವಾಲಯ ಸಂಬಂಧ ಹೋರಾಟ ನಡೆಸಿದ್ದರೆ ಸುರಕ್ಷಿತವಾಗಿರುತ್ತಿದ್ದನಾ? ಎಂದು ಅವರು ಪ್ರಶ್ನಿಸಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

9 minutes ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

18 minutes ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

33 minutes ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

47 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

4 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

4 hours ago