ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಹಿನ್ನಲೆ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರ ಹೈಟೆಕ್ ಬಸ್ಸನ್ನು ಬೆಂಗಳೂರು ನಗರದ ಹೊರವಲಯದ ಚೆಕ್ ಪೋಸ್ಟ್ ಒಂದರ ಬಳಿ ಚುನಾವಣಾಧಿಕಾರಿಗಳು ತಡೆದು ತಪಾಸಣೆ ನಡೆಸಿದ್ದಾರೆ.
ಸ್ಥಳೀಯ ಅಧಿಕಾರಿಗಳ ಸಹಾಯದೊಂದಿಗೆ ಚುನಾವಣಾಧಿಕಾರಿಗಳು ಬಸ್ಸಿನ ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸಲು ತೆರಳುತ್ತಿದ್ದ ವೇಳೆ ಈ ಘಡನೆ ನಡೆದಿದ್ದು, ಚುನಾವಣಾಧಿಕಾರಿಗಳ ಕರ್ತವ್ಯಕ್ಕೆ ಯಾವುದೇ ಅಡ್ಡಿಪಡಿಸದೇ ಸಿಎಂ ಸಿದ್ದರಾಮಯ್ಯ ಅವರು ಬಸ್ ಒಳಗೇ ಕುಳಿತು ಸಹಕಾರ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕಾಗಿಯೇ ಈ ಹೈಟೆಕ್ ಬಸ್ಸನ್ನು ಸಿದ್ಧಗೊಳಿಸಲಾಗಿದ್ದು, ಬೆಂಗಳೂರು ಸುತ್ತಮುತ್ತ ಹಾಗೂ ಇತರ ಭಾಗಗಳಲ್ಲಿ ಪ್ರಚಾರ ನಡೆಸುವಾಗ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಈ ಬಸ್ ನಲ್ಲಿ ಪ್ರಯಾಣಿಸುತ್ತಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…