Featured

ಸಿಎಂ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ : ಯತ್ನಾಳ್ – vishwanews24

ಸಿಎಂ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ : ಯತ್ನಾಳ್

ವಿಜಯಪುರ: ಸಿಎಂ ಸಿದ್ದರಾಮಯ್ಯ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದ್ದಾರೆ.

ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಕಾಂಗ್ರೆಸ್ ಜಿಲ್ಲಾ ನಾಯಕರಿಗೆ ಡಿಕೆಶಿ ಕ್ಲಾಸ್ ವಿಚಾರವಾಗಿ ಮಾತನಾಡಿದ ಅವರು, ಡಿಕೆಶಿ ಎದುರೇ ಜನ ನನ್ನ ಪರವಾಗಿ ಕೂಗೂ ಹಾಕಿದರೆ ಜಿಲ್ಲೆಯ ನಾಯಕರು ಏನ್ ಮಾಡಬೇಕು. ಸಿಎಂ ಎದುರು ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ. ಜನರು ನನ್ನನ್ನು ಬೆಂಬಲಿಸಿದ್ದಾರೆ. ಅದು ನನ್ನ ಮೇಲಿರುವ ಅಭಿಮಾನ. ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ. ನಮ್ಮನ್ನ, ಪ್ರತಾಪ್ ಸಿಂಹ ಅವರನ್ನು ಬಿಟ್ಟರೆ ಹುಷಾರ್ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಕಾರ್ಯಕ್ರಮದಲ್ಲಿ ಹೊಗಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಅಲ್ಲ, ಅವರು ರಾಜ್ಯದ ಸಿಎಂ. ಮುಖ್ಯಮಂತ್ರಿ ನಮ್ಮ ಕ್ಷೇತ್ರಕ್ಕೆ ಬಂದಾಗ ಗೌರವ ಸಲ್ಲಿಸಬೇಕು. ಹೀಗಾಗಿ ನಾನು ಗೌರವ ಸಲ್ಲಿಸಿದ್ದೇನೆ. ಇದಕ್ಕೆ ಕೆಲವರಿಗೆ ನೋವಾದ್ರೆ ನಾನೇನು ಮಾಡೋಕಾಗಲ್ಲ. ನಾನು ಸಿದ್ದರಾಮಯ್ಯ ಅವರಿಗೆ ಗೌರವ ನೀಡಿದಂತೆ ಕಾಂಗ್ರೆಸ್‌ನವರು ಸಹ ಪ್ರಧಾನಿಗೆ ಗೌರವ ನೀಡುತ್ತಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿ ರಾಜಾಧ್ಯಕ್ಷ ವಿಳಂಬ ವಿಚಾರವಾಗಿ ಮಾತನಾಡಿ, ಹೈಕಮಾಂಡ್ ನಾಯಕರಿಗೆ ಎಲ್ಲವೂ ಗೊತ್ತಿದೆ. ಯಾರಿಗೆ ಯಾವಾಗ ಏನು ಕೊಡಬೇಕು ಎಂದು ಗೊತ್ತಿದೆ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದಿದ್ದಾರೆ.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago