ವಿಜಯಪುರ: ಸಿಎಂ ಸಿದ್ದರಾಮಯ್ಯ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಕಾಂಗ್ರೆಸ್ ಜಿಲ್ಲಾ ನಾಯಕರಿಗೆ ಡಿಕೆಶಿ ಕ್ಲಾಸ್ ವಿಚಾರವಾಗಿ ಮಾತನಾಡಿದ ಅವರು, ಡಿಕೆಶಿ ಎದುರೇ ಜನ ನನ್ನ ಪರವಾಗಿ ಕೂಗೂ ಹಾಕಿದರೆ ಜಿಲ್ಲೆಯ ನಾಯಕರು ಏನ್ ಮಾಡಬೇಕು. ಸಿಎಂ ಎದುರು ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ. ಜನರು ನನ್ನನ್ನು ಬೆಂಬಲಿಸಿದ್ದಾರೆ. ಅದು ನನ್ನ ಮೇಲಿರುವ ಅಭಿಮಾನ. ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ. ನಮ್ಮನ್ನ, ಪ್ರತಾಪ್ ಸಿಂಹ ಅವರನ್ನು ಬಿಟ್ಟರೆ ಹುಷಾರ್ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಕಾರ್ಯಕ್ರಮದಲ್ಲಿ ಹೊಗಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಅಲ್ಲ, ಅವರು ರಾಜ್ಯದ ಸಿಎಂ. ಮುಖ್ಯಮಂತ್ರಿ ನಮ್ಮ ಕ್ಷೇತ್ರಕ್ಕೆ ಬಂದಾಗ ಗೌರವ ಸಲ್ಲಿಸಬೇಕು. ಹೀಗಾಗಿ ನಾನು ಗೌರವ ಸಲ್ಲಿಸಿದ್ದೇನೆ. ಇದಕ್ಕೆ ಕೆಲವರಿಗೆ ನೋವಾದ್ರೆ ನಾನೇನು ಮಾಡೋಕಾಗಲ್ಲ. ನಾನು ಸಿದ್ದರಾಮಯ್ಯ ಅವರಿಗೆ ಗೌರವ ನೀಡಿದಂತೆ ಕಾಂಗ್ರೆಸ್ನವರು ಸಹ ಪ್ರಧಾನಿಗೆ ಗೌರವ ನೀಡುತ್ತಾರೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿ ರಾಜಾಧ್ಯಕ್ಷ ವಿಳಂಬ ವಿಚಾರವಾಗಿ ಮಾತನಾಡಿ, ಹೈಕಮಾಂಡ್ ನಾಯಕರಿಗೆ ಎಲ್ಲವೂ ಗೊತ್ತಿದೆ. ಯಾರಿಗೆ ಯಾವಾಗ ಏನು ಕೊಡಬೇಕು ಎಂದು ಗೊತ್ತಿದೆ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…