ರಾಮನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀರಾಮನಿದ್ದಂತೆ. ಇನ್ನು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಆಂಜನೇಯನಿದ್ದಂತೆ. ರಾಮನಗರದ ಜನ ಸೀತಾದೇವಿ (ಅನಿತಾ ಕುಮಾರಸ್ವಾಮಿ) ಅವರನ್ನು ರಾಮನಗರಕ್ಕೆ ಕರೆತನ್ನಿ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯ ಪಟ್ಟಿದ್ದಾರೆ.
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಾ ಮಾತನಾಡಿ, ರಾಮ ಹಾಗೂ ಆಂಜನೇಯನ ಜತೆ ಸೀತಾಮಾತೆಯನ್ನ ಕರೆತಂದ್ರೆ ರಾಮನಗರ ಅಲ್ಲದೇ ರಾಜ್ಯವೂ ಕೂಡಾ ರಾಮರಾಜ್ಯವಾಗುತ್ತದೆ ಎಂದರು.
ರೇವಣ್ಣ ಅವರು ಹಗಲು ರಾತ್ರಿ ಅಭಿವೃದ್ಧಿ ಕಾರ್ಯಕ್ಕಾಗಿ ಶ್ರಮಿಸುತ್ತಿದ್ದಾರೆ. ಈಗ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತಷ್ಟು ಬಲ ಬರಲು ಮುಂಬರುವ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಜನತಾ ದರ್ಶನ, ಗ್ರಾಮ ವಾಸ್ತವ್ಯ ಮೂಲಕ ಎಚ್.ಡಿ.ಕುಮಾರಸ್ವಾಮಿ ಇತರರಿಗೆ ಮಾದರಿಯಾಗಿದ್ದಾರೆ. ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು ಆಯ್ಕೆಯಾದರೆ ರಾಮನಗರದ ಜತೆಗೆ ರಾಜ್ಯವೂ ಸಮೃದ್ಧವಾಗಿ ಪ್ರಗತಿ ಹೊಂದುತ್ತದೆ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…