Featured

ಸಿಎಂ ಗ್ರಾಮ ವಾಸ್ತವ್ಯ : ‘ದೇಶಕ್ಕೇ ಮಾದರಿಯಾಗುವಂತಹ ಕಾರ್ಯಕ್ರಮ ಇದಾಗಬೇಕು : ಪ್ರಿಯಾಂಕ್ ಖರ್ಗೆ -Vishwanews24

ಬೆಂಗಳೂರು,  : ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನಃ ಆರಂಭಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ. ‘ದೇಶಕ್ಕೇ ಮಾದರಿಯಾಗುವಂತಹ ಕಾರ್ಯಕ್ರಮ ಇದಾಗಬೇಕು’ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಗ್ರಾಮ ವಾಸ್ತವ್ಯದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರು, ‘ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯದ ಮೂಲಕ ಈಗಾಗಲೇ ಜನಪ್ರಿಯರಾಗಿದ್ದಾರೆ. ಹೈದರಾಬಾದ್ ಕರ್ನಾಟಕ ಮೂಲಕ ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಿರುವುದು ಸ್ವಾಗತಾರ್ಹ’ ಎಂದರು.

‘ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ಏರ್ಪಡಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿಗಳು ವಾಸ್ತವ್ಯ ಮಾಡುವ ಗ್ರಾಮದ ಜೊತೆಗೆ ಸುತ್ತಮುತ್ತಲಿನ ಗ್ರಾಮಗಳ ಶಾಲೆಗಳಿಗೂ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಚಿವರು ಸಲಹೆ ನೀಡಿದರು.

ಸಭೆಯಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಪಾಲ್ಗೊಂಡಿದ್ದರು. ಗ್ರಾಮ ವಾಸ್ತವ್ಯ ಒಂದು ವಿನೂತನವಾದ ಕಾರ್ಯಕ್ರಮ. ಜನರೊಂದಿಗೆ ನೇರ ಸಂಪರ್ಕಕ್ಕೆ ಇದು ಸಹಾಯಕ. ಈ ಹಿಂದೆ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಹಲವು ಯೋಜನೆಗಳು ರೂಪುಗೊಂಡಿದ್ದವು. ಜನರ ಆಶೋತ್ತರಗಳನ್ನು ಈಡೇರಿಸಲು ಜಿಲ್ಲಾಡಳಿತ ಸಜ್ಜಾಗಬೇಕು ಎಂದು ಸಚಿವರು ಹೇಳಿದರು.

ಎರಡನೇ ಹಂತದ ದಿನಾಂಕ ಬದಲುಕೊಂಡ ಮುಖ್ಯಮಂತ್ರಿಗಳು, ‘ಆ ಸಂದರ್ಭದಲ್ಲಿ ಅನುಷ್ಠಾನಗೊಂಡ ಹಲವು ಯೋಜನೆಗಳನ್ನು ಸಭೆಯ ಗಮನಕ್ಕೆ ತಂದರು. ಸುವರ್ಣ ಗ್ರಾಮ ಯೋಜನೆ ಅತ್ಯಂತ ನಿರೀಕ್ಷಿತ ಯೋಜನೆಯಾಗಿ ರೂಪುಗೊಂಡಿತ್ತು. ಆದರೆ ನನ್ನ ಅವಧಿಯ ನಂತರ ನನ್ನ ಆಶಯಕ್ಕೆ ಅನುಗುಣವಾಗಿ ಸುವರ್ಣ ಗ್ರಾಮ ಯೋಜನೆ ರೂಪುಗೊಳ್ಳಲಿಲ್ಲ. ಅದಕ್ಕೆ ಮತ್ತೆ ಆ ಯೋಜನೆಗೆ ಜೀವ ಕೊಡಲು ಅಧಿಕಾರಿಗಳು ಸಜ್ಜಾಗಬೇಕು’ ಎಂದು ಸಲಹೆ ಕೊಟ್ಟರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

18 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

19 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

19 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

19 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

19 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

19 hours ago