Featured

ಸಿಎಂ ಬೊಮ್ಮಾಯಿಗೆ ಬೆಂಬಲ ಘೋಷಿಸಿದ ನಟ ಕಿಚ್ಚ ಸುದೀಪ್‌ – Vishwanews24

ಸಿಎಂ ಬೊಮ್ಮಾಯಿಗೆ ಬೆಂಬಲ ಘೋಷಿಸಿದ ನಟ ಕಿಚ್ಚ ಸುದೀಪ್‌

ಬೆಂಗಳೂರು: ನನ್ನ ಚಲನಚಿತ್ರದ ಕಷ್ಟದ ದಿನಗಳಲ್ಲಿ ನನಗೆ ಬೆನ್ನೆಲುಬಾಗಿ ನಿಂತವರು ಮಾಮ ಎಂದೇ ಕರೆಯುವಂತ ಬಸವರಾಜ ಬೊಮ್ಮಾಯಿ ಅವರು ಹೀಗಾಗಿ ಅವರು ಮತ್ತು ನನ್ನ ಕೆಲ ಸ್ನೇಹಿತರ ಪರವಾಗಿ ನಿಲ್ಲುತ್ತೇನೆ ಎಂದು ನಗರದ ಅಶೋಕ ಹೊಟೇಲ್ ನಲ್ಲಿ ಇಂದು ಜಂಟಿ ಸುದ್ದಿಗೋಷ್ಠಿ ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ.

ನಾನು ಚಿತ್ರರಂಗಕ್ಕೆ ಎಂಟ್ರಿಕೊಟ್ಟಾಗ ನನ್ನ ಕಷ್ಟದಲ್ಲಿ ಸಿಎಂ ಬೊಮ್ಮಾಯಿ ಜತೆಗಿದ್ದರು. ಅವರನ್ನು ಚಿಕ್ಕದಿನಿಂದಲೂ ನೋಡಿದ್ದೇನೆ. ಹೀಗಾಗಿ, ನಾನು ಬೊಮ್ಮಾಯಿ ಅವರಿಗೆ ಬೆಂಬಲ ನೀಡುತ್ತಿದ್ದೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.

ನನಗೆ ಯಾರೂ ಗಾಡ್‌ ಫಾದರ್‌ ಇರಲಿಲ್ಲ. ಇಲ್ಲಿ ನಿಲುವು, ರಾಜಕೀಯ ಎಂದು ಬರುವುದಿಲ್ಲ. ನಾನು ಯಾವುದೇ ಪಕ್ಷದ ಪರ ನಿಂತಿಲ್ಲ ಎಂದು ಸುದೀಪ್‌ ತಿಳಿಸಿದ್ದಾರೆ.

ಆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನಟ ಸುದೀಪ್ ಅವರೊಂದಿಗೆ ನಾನು ಈ ಹಿಂದೆಯೇ ಚರ್ಚಿಸಿದ್ದೆ. ನಿಮಗಾಗಿ ಪ್ರಚಾರ ಮಾಡುತ್ತೇನೆಂದು ಮಾತು ಕೊಟ್ಟಿದ್ದಾರೆ. ಅವರು ಯಾವುದೇ ಪಕ್ಷಕ್ಕೆ ಸೇರಿದವರು ಅಲ್ಲ. ನಮ್ಮ ಪಕ್ಷಕ್ಕೆ ಸೇರಿಕೊಳ್ಳದೇ ಇದ್ದರೂ ಬಿಜೆಪಿ ಪರ ಸುದೀಪ್ ಪ್ರಚಾರ ಮಾಡಲಿದ್ದಾರೆಂದು ಸ್ಪಷ್ಟಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸುದೀಪ್, ನಾನು ಪಕ್ಷವನ್ನು ಬೆಂಬಲಿಸುತ್ತೇನೆ, ಪ್ರಚಾರವೂ ಮಾಡುತ್ತೇನೆ. ಆದರೆ ಎಲ್ಲಾ ಕಡೆ ಹೋಗಲು ನನಗೂ ಕಷ್ಟ. ನನ್ನ ಜೀವನದಲ್ಲಿ ಪಕ್ಷ ಬರುವುದಿಲ್ಲ. ಬೊಮ್ಮಾಯಿ ಅವರನ್ನು ನೋಡಿ ಇಲ್ಲಿಗೆ ಬಂದಿದ್ದೇನೆ ಎಂದಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago