ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ಕೊಟ್ಟಿಲ್ಲ : ವಿನಯ್ ಕುಮಾರ್ ಸೊರಕೆ – Vishwanews24
ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ಕೊಟ್ಟಿಲ್ಲ : ವಿನಯ್ ಕುಮಾರ್ ಸೊರಕೆ – Vishwanews24
ಉಡುಪಿ: 5 ಶಾಸಕರು ಇಬ್ಬರು ಪ್ರಭಾವಿ ಸಚಿವರು ಒಬ್ಬರು ಕೇಂದ್ರ ಸಚಿವೆ, ರಾಷ್ಟ್ರಮಟ್ಟದ ಪ್ರಭಾವಿ ನಾಯಕ ಬಿ.ಎಲ್ ಸಂತೋಷ್ ಇರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ಸರ್ಕಾರ ಬಜೆಟ್ನಲ್ಲಿ ಕೊಟ್ಟಿದ್ದೇನು? ಎಂದು ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಸೊರಕೆ ಪ್ರಶ್ನೆ ಮಾಡಿದ್ದಾರೆ.
ಕರಾವಳಿ ಭಾಗದಲ್ಲಿ ಅಭಿವೃದ್ಧಿಗೆ ಒತ್ತು ಕೊಟ್ಟರೆ ಯಾವುದೇ ರಾಜಕೀಯ ಲಾಭ ಸಿಗುವುದಿಲ್ಲ. ಭಾವನಾತ್ಮಕ ವಿಚಾರಗಳೇ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಶ್ರೀರಕ್ಷೆ ಎಂದು ಗೊತ್ತಿದ್ದು ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ಕೊಟ್ಟಿಲ್ಲ ಎಂದು ವ್ಯಂಗ್ಯದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಬಜೆಟ್ನಲ್ಲಿ ಉಡುಪಿಯನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡಲಾಗಿದೆ. ಆರ್ಥಿಕ ಪರಿಸ್ಥಿತಿಯನ್ನು ಉತ್ತೇಜನ ಗೊಳಿಸುವ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಬಜೆಟ್ ಗಾತ್ರ ಶೇಕಡ ಹೆಚ್ಚಾಗಿದೆ. ಎಷ್ಟು ಸಾಲ ಪಡೆದು ಬಜೆಟ್ ಮಂಡಿಸಬಹುದೋ ಅದೆಲ್ಲವನ್ನು ಬಸವರಾಜ ಬೊಮ್ಮಾಯಿ ಬಳಸಿಕೊಂಡಿದ್ದಾರೆ. ಹಿಂದಿನ ಸರ್ಕಾರವು ಈ ಪ್ರಯೋಜನ ಬಳಸಿಕೊಂಡಿದೆ ಆದರೆ ಬೊಮ್ಮಾಯಿಯಷ್ಟು ಅಲ್ಲ ಎಂದು ಟೀಕಿಸಿದ್ದಾರೆ.
