ಬೆಂಗಳೂರು: ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಬಸವರಾಜ ಹೊರಟ್ಟಿ, ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ ಮಾಡಿದರು.
ಜೆಡಿಎಸ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಬಿಎಸ್ ವೈ, ಇಂದು ಸಂಜೆ ಸಭೆ ನಡೆಸಿ ಪಕ್ಷದ ತೀರ್ಮಾನ ಮಾಡುತ್ತೇವೆಂದು ತಿಳಿಸಿದರು. ಆ ಮೂಲಕ ಜೆಡಿಎಸ್ ಗೆ ಸಭಾಪತಿ ಸ್ಥಾನ, ಬಿಜೆಪಿಗೆ ಉಪ ಸಭಾಪತಿ ಸ್ಥಾನ ಬಹುತೇಕ ಖಚಿತವಾದಂತಾಗಿದೆ.
ಸಿಎಂ ಭೇಟಿ ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ, ಸಭಾಪತಿ ಸ್ಥಾನದ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದೆ. ಈ ವೇಳೆ ಜೆಡಿಎಸ್ ಗೆ ಸಭಾಪತಿ ಸ್ಥಾನ ಬಿಟ್ಟು ಕೊಡುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಸಿಎಂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇಂದು ಸಂಜೆ ಸಭೆ ಸೇರಿ ತೀರ್ಮಾನ ಮಾಡುತ್ತಾರೆ. ಉಪ ಸಭಾಪತಿ ಸ್ಥಾನ ಬಿಜೆಪಿಗೆ ಬಿಟ್ಟು ಕೊಡಲಿದ್ದೇವೆ ಎಂದರು.
29 ರಂದು ಉಪ ಸಭಾಪತಿ ಚುನಾವಣೆ ಇದೆ. ಇದರ ಬಳಿಕ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ಅವರು ಉಪ ಸಭಾಪತಿ ಅವರಿಗೆ ರಾಜೀನಾಮೆ ನೀಡಬಹುದು ನಂತರ ರಾಜ್ಯಪಾಲರು ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಬೇಕಾಗುತ್ತದೆ.
ಅವರು ಇದೇ ಅಧಿವೇಶನದಲ್ಲಿ ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಿದರೆ, ಸಭಾಪತಿಯಾಗಿ ಆಯ್ಕೆ ಆಗುತ್ತೇನೆ. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಸಭಾಪತಿ ಆಯ್ಕೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.ಈ ಸಂಬಂಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ಸಭಾಪತಿ ಸ್ಥಾನ ಜೆಡಿಎಸ್ಗೆ ಬೇಕು. ಈ ಕುರಿತು ಚರ್ಚೆ ನಡೆಸಿ ಎಂದು ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿರುವ ಬಸವರಾಜ ಹೊರಟ್ಟಿ ಅವರಿಗೆ ಸೂಚನೆ ನೀಡಿದ್ದಾರೆ. ಹಾಗಾಗಿ ಇಂದು ಮಾತುಕತೆ ನಡೆಸಲು ಹೊರಟ್ಟಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದಾರೆ.
ಏಪ್ರಿಲ್ 1ರಿಂದ ಪಡಿತರದಾರರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ, ರಾಗಿ ವಿತರಣೆ -Vishwanews24
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…
ಮಲ್ಪೆ : ಬೋಟ್ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…
ಉಡುಪಿ :ಆ. 27 ರಂದು ನೇರ ಸಂದರ್ಶನ ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…