Featured

ಸಿಎಂ ಭೇಟಿ ಮಾಡಿದ ಬಸವರಾಜ ಹೊರಟ್ಟಿ ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ -Vishwanews24

ಸಿಎಂ ಭೇಟಿ ಮಾಡಿದ ಬಸವರಾಜ ಹೊರಟ್ಟಿ ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ -Vishwanews24

ಬೆಂಗಳೂರು: ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಬಸವರಾಜ ಹೊರಟ್ಟಿ, ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ ಮಾಡಿದರು.

ಜೆಡಿಎಸ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಬಿಎಸ್ ವೈ, ಇಂದು ಸಂಜೆ ಸಭೆ ನಡೆಸಿ ಪಕ್ಷದ ತೀರ್ಮಾನ ಮಾಡುತ್ತೇವೆಂದು ತಿಳಿಸಿದರು. ಆ ಮೂಲಕ ಜೆಡಿಎಸ್ ಗೆ ಸಭಾಪತಿ ಸ್ಥಾನ, ಬಿಜೆಪಿಗೆ ಉಪ ಸಭಾಪತಿ ಸ್ಥಾನ ಬಹುತೇಕ ಖಚಿತವಾದಂತಾಗಿದೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ, ಸಭಾಪತಿ ಸ್ಥಾನದ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದೆ. ಈ ವೇಳೆ ಜೆಡಿಎಸ್ ಗೆ ಸಭಾಪತಿ ಸ್ಥಾನ ಬಿಟ್ಟು ಕೊಡುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಸಿಎಂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇಂದು ಸಂಜೆ ಸಭೆ ಸೇರಿ ತೀರ್ಮಾನ ಮಾಡುತ್ತಾರೆ. ಉಪ ಸಭಾಪತಿ ಸ್ಥಾನ ಬಿಜೆಪಿಗೆ ಬಿಟ್ಟು ಕೊಡಲಿದ್ದೇವೆ ಎಂದರು.

ಉಡುಪಿ :ಮಲ್ಪೆಯ ಪಡುಕೆರೆಯಲ್ಲಿ ಮರೀನಾ ಬೀಚ್ : ಪಬ್, ಕ್ಲಬ್, ಹೋಟೆಲ್‌ಗಳು ಆಗಲು ಅವಕಾಶ ಕೊಡುವುದಿಲ್ಲ , ನಗರದ ವಾಸಿಗಳಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನನ್ನದು : ಶಾಸಕ ರಘುಪತಿ ಭಟ್ -Vishwanews24

29 ರಂದು ಉಪ ಸಭಾಪತಿ ಚುನಾವಣೆ ಇದೆ. ಇದರ ಬಳಿಕ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ಅವರು ಉಪ ಸಭಾಪತಿ ಅವರಿಗೆ ರಾಜೀನಾಮೆ ನೀಡಬಹುದು  ನಂತರ ರಾಜ್ಯಪಾಲರು ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಬೇಕಾಗುತ್ತದೆ.

ಅವರು ಇದೇ ಅಧಿವೇಶನದಲ್ಲಿ ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಿದರೆ, ಸಭಾಪತಿಯಾಗಿ ಆಯ್ಕೆ ಆಗುತ್ತೇನೆ. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಸಭಾಪತಿ ಆಯ್ಕೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.ಈ ಸಂಬಂಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ಸಭಾಪತಿ ಸ್ಥಾನ ಜೆಡಿಎಸ್​ಗೆ ಬೇಕು. ಈ ಕುರಿತು ಚರ್ಚೆ ನಡೆಸಿ ಎಂದು ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿರುವ ಬಸವರಾಜ ಹೊರಟ್ಟಿ ಅವರಿಗೆ ಸೂಚನೆ ನೀಡಿದ್ದಾರೆ. ಹಾಗಾಗಿ ಇಂದು ಮಾತುಕತೆ ನಡೆಸಲು ಹೊರಟ್ಟಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದಾರೆ.

ಏಪ್ರಿಲ್ 1ರಿಂದ ಪಡಿತರದಾರರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ, ರಾಗಿ ವಿತರಣೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

15 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

15 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

15 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

15 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

16 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

16 hours ago