ಸಿಎಂ ಯಡಿಯೂರಪ್ಪ ಅವರ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ?? -Vishwanews24
ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಯಡಿಯೂರಪ್ಪ ಅವರ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ, ಇದೇ ಮೊದಲ ಬಾರಿಗೆ ಸಿಎಂ ಆಗಿದ್ದವರೊಬ್ಬರು ಸಚಿವರಾಗಿ ಕಾರ್ಯ ನಿರ್ವಹಿಸುವುದು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮೊದಲಾಗಿದೆ.
ಉತ್ತರ ಕರ್ನಾಟಕದ ಪ್ರಭಾವಿ ಲಿಂಗಾಯತ ನಾಯಕನಾಗಿರುವ ಜಗದೀಶ್ ಶೆಟ್ಟರ್ ಅವರಿಗೆ ಸಚಿವ ಸ್ಥಾನ ಖಚಿತವಾಗಿ ಸಿಗಲಿದೆ, ಅವರನ್ನು ಸಂಪುಟಕ್ಕೆ ಸೇರಿಸಿಕೊಂಡರೇ ಹಲವು ಉಪಯೋಗಗಳು ಆಗುತ್ತವೆ, ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯ ಲಿಂಗಾಯಿತರಿದ್ದು, ಅವರ ವಿಶ್ವಾಸ ಗಳಿಸಲು ಸಾಧ್ಯವಾಗಲಿದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.
ಹುಬ್ಬಳ್ಳಿ ಮೂಲದ 63 ವರ್ಷದ ಜಗದೀಶ್ ಶೆಟ್ಟರ್ 2008 ರಲ್ಲಿ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಅದರ ಮರು ವರ್ಷ ಯಡಿಯೂರಪ್ಪ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ನೇಮಕವಾಗಿದ್ದರು, ಲಿಂಗಾಯತರ ಪ್ರಮುಖ ನಾಯಕರಾಗಿರುವ ಶೆಟ್ಟರ್ 2012 ರಲ್ಲಿ ಡಿವಿ ಸದಾನಂದಗೌಡ ಅವರ ಬದಲಿಗೆ ಮುಖ್ಯಮಂತ್ರಿಯಾಗಿದ್ದರು.,
ಮೊದಲ ಕಂತಿನಲ್ಲಿ 10-15 ಶಾಸಕರು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆಧರೆ ಈ ಬಗ್ಗೆ ಶೆಟ್ಟರ್ ಪಕ್ಷ ಯಾವುದೇ ಹುದ್ದೆ ನೀಡಿದರು ನಾನು ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದ ಯಡಿಯೂರಪ್ಪ ಸಿಎಂ ಆಗಿರುವ ಕಾರಣ ಮುಂದಿನ ಕೆಲ ದಿನಗಳಲ್ಲಿ ಬಿದೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.
