ಸಿಎಂ ಯಡಿಯೂರಪ್ಪ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ.vishwanews24
ಸಿಎಂ ಯಡಿಯೂರಪ್ಪ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ
ಉಡುಪಿ: ಸಿಎಂ ಯಡಿಯೂರಪ್ಪ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಕೃಷ್ಣ ಮಠದಲ್ಲಿ ನಡೆಯುತ್ತಿರುವ ಪರ್ಯಾಯ ಮಹೋತ್ಸವದ 500ನೇ ವರ್ಷಾಚರಣೆಯ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಕೃಷ್ಣಮಠದಲ್ಲಿ ನೂತನವಾಗಿ ನಿರ್ಮಿಸಿರುವ ಕ್ಯೂ ಕಾಂಪ್ಲೆಕ್ಸ್ ವಿಶ್ವ ಪಥ ವನ್ನು ಈ ವೇಳೆ ಸಿಎಂ ಉದ್ಘಾಟಿಸಿದರು. ಬಳಿಕ ಕೃಷ್ಣಮಠಕ್ಕೆ ಭೇಟಿ ನೀಡಿದ ಅವರು, ನವಗ್ರಹ ಕಿಂಡಿಯ ಮೂಲಕ ಕಡಗೋಲು ಕೃಷ್ಣನ ದರ್ಶನ ಕೈಗೊಂಡರು. ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು ಉಪಸ್ಥಿತರಿದ್ದು ಕೃಷ್ಣ ದೇವರ ದರ್ಶನ ಮಾಡಿಸಿದರು. ಕೃಷ್ಣ ದೇವರ ಸಮ್ಮುಖದಲ್ಲಿ ಅಷ್ಟಮಠಾಧೀಶರು ಉಪಸ್ಥಿತರಿದ್ದು ಯಡಿಯೂರಪ್ಪ ಅವರನ್ನು ಸನ್ಮಾನಿಸಿದರು. ಬಳಿಕ ರಾಜಾಂಗಣದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಮಹೋತ್ಸವಕ್ಕೆ ಸಿಎಂ ಚಾಲನೆ ನೀಡಿದರು.



