ಸಿಎಂ ಯೋಗಿ ಮೋದಿಯಷ್ಟು ಸಮರ್ಥ ಅಭ್ಯರ್ಥಿ ಅಲ್ಲ ; ಮೋದಿಯೇ ಪ್ರಧಾನಿ ಅಭ್ಯರ್ಥಿ ಆಗಲಿ :ಪೇಜಾವರ ಶ್ರೀ

ಉಡುಪಿ: ಪಂಚರಾಜ್ಯ ಫಲಿತಾಂಶವು ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆಯಾಗಿದೆ ಎಂದಿರುವ ಶ್ರೀಗಳು, ಆರ್ಥಿಕ ಸುಧಾರಣೆ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಆದ್ಯತೆ ಕೊಡಲಿ. ಮಂದಿರ ನಿರ್ಮಾಣ ಹಿಂದೂ ಮತದಾರರ ಉತ್ಸಾಹವನ್ನು ಹೆಚ್ಚಿಸಬಹುದು. ಎನ್‍ಡಿಎ ಮೈತ್ರಿಕೂಟದ ಮೂಲಕ ಸಮಾನ ವಿಚಾರಧಾರೆಯುಳ್ಳ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಸಾಧಿಸಬೇಕು ಎಂದು ತಿಳಿಸಿದರು.

ಇತರೆ ಮಿತ್ರ ಪಕ್ಷಗಳ ಜೊತೆ ಉತ್ತಮ ಬಾಂಧವ್ಯ ಹೊಂದಬೇಕು. ಸಮಾನ ವಿಚಾರಧಾರೆಯುಳ್ಳ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಮಾಡಬೇಕು. ಚಂದ್ರಬಾಬು ನಾಯ್ಡು ಅವರ ವಿರೋಧ ಕಟ್ಟಿಕೊಂಡರೆ ಬಿಜೆಪಿಗೆ ನಷ್ಟವಾಗಲಿದೆ. ಚಂದ್ರಬಾಬು ನಾಯ್ಡು ಬಿಜೆಪಿಯನ್ನು ಬಗ್ಗುಬಡಿಯಲು ಹಠ ಹಿಡಿದಿದ್ದಾರೆ. ವಾಜಪೇಯಿಯ ನೀತಿಯನ್ನು ಪ್ರಧಾನಿ ಮೋದಿ ಅನುಸರಿಸಬೇಕು ಎಂದರು.

ಪ್ರಧಾನಿ ಮೋದಿ ಕೆಲವು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಮೋದಿ ಬಗ್ಗೆ ಮೊದಲಿದ್ದ ನಿರೀಕ್ಷೆ ಈಗ ಜನರಲ್ಲಿ ಇಲ್ಲ. ಜನರು ನಿರೀಕ್ಷೆ ಇಟ್ಟಷ್ಟು ಕೆಲಸ ದೇಶದಲ್ಲಿ ಆಗಿಲ್ಲ ಎಂದು ಹೇಳಿದ ಅವರು, ನೋಟು ನಿಷೇಧದ ಫಲ ಜನಸಾಮಾನ್ಯರಿಗೆ ಮುಟ್ಟಿಲ್ಲ ಎಂದು ಅಭಿಪ್ರಾಯ ಪಟ್ಟರು.

ಇನ್ನು ಯೋಗಿ ಆದಿತ್ಯನಾಥ್ ಮುಂದಿನ ಪ್ರಧಾನಿ ಅಭ್ಯರ್ಥಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಅಭ್ಯರ್ಥಿ ಆಗಬಾರದು ,.ದೇಶಕ್ಕೆ ಮೋದಿಯೇ ಮುಂದಿನ ಪ್ರಧಾನಿಯಾಗಬೇಕು. ಸಿಎಂ ಯೋಗಿ ಮೋದಿಯಷ್ಟು ಸಮರ್ಥರಲ್ಲ. ಆದಿತ್ಯನಾಥ್ ಅವರು ರಾಜಕಾರಣಿಯಲ್ಲ ಅವರು ಸಂತರು. ಸಂತ ಪರಂಪರೆಯ ವ್ಯಕ್ತಿ. ಉತ್ತರ ಪ್ರದೇಶದಲ್ಲಿ ಇಷ್ಟು ಕೆಲಸಗಳನ್ನು ಮಾಡಿರುವುದೇ ವಿಶೇಷ. ಆದರೆ ಅವರು ಈಗ ಪ್ರಧಾನಿ ಅಭ್ಯರ್ಥಿ ಆಗಬಾರದು ಎಂದು ಹೇಳಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

11 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

11 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

11 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago