ಉಡುಪಿ: ಪಂಚರಾಜ್ಯ ಫಲಿತಾಂಶವು ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆಯಾಗಿದೆ ಎಂದಿರುವ ಶ್ರೀಗಳು, ಆರ್ಥಿಕ ಸುಧಾರಣೆ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಆದ್ಯತೆ ಕೊಡಲಿ. ಮಂದಿರ ನಿರ್ಮಾಣ ಹಿಂದೂ ಮತದಾರರ ಉತ್ಸಾಹವನ್ನು ಹೆಚ್ಚಿಸಬಹುದು. ಎನ್ಡಿಎ ಮೈತ್ರಿಕೂಟದ ಮೂಲಕ ಸಮಾನ ವಿಚಾರಧಾರೆಯುಳ್ಳ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಸಾಧಿಸಬೇಕು ಎಂದು ತಿಳಿಸಿದರು.
ಇತರೆ ಮಿತ್ರ ಪಕ್ಷಗಳ ಜೊತೆ ಉತ್ತಮ ಬಾಂಧವ್ಯ ಹೊಂದಬೇಕು. ಸಮಾನ ವಿಚಾರಧಾರೆಯುಳ್ಳ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಮಾಡಬೇಕು. ಚಂದ್ರಬಾಬು ನಾಯ್ಡು ಅವರ ವಿರೋಧ ಕಟ್ಟಿಕೊಂಡರೆ ಬಿಜೆಪಿಗೆ ನಷ್ಟವಾಗಲಿದೆ. ಚಂದ್ರಬಾಬು ನಾಯ್ಡು ಬಿಜೆಪಿಯನ್ನು ಬಗ್ಗುಬಡಿಯಲು ಹಠ ಹಿಡಿದಿದ್ದಾರೆ. ವಾಜಪೇಯಿಯ ನೀತಿಯನ್ನು ಪ್ರಧಾನಿ ಮೋದಿ ಅನುಸರಿಸಬೇಕು ಎಂದರು.
ಪ್ರಧಾನಿ ಮೋದಿ ಕೆಲವು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಮೋದಿ ಬಗ್ಗೆ ಮೊದಲಿದ್ದ ನಿರೀಕ್ಷೆ ಈಗ ಜನರಲ್ಲಿ ಇಲ್ಲ. ಜನರು ನಿರೀಕ್ಷೆ ಇಟ್ಟಷ್ಟು ಕೆಲಸ ದೇಶದಲ್ಲಿ ಆಗಿಲ್ಲ ಎಂದು ಹೇಳಿದ ಅವರು, ನೋಟು ನಿಷೇಧದ ಫಲ ಜನಸಾಮಾನ್ಯರಿಗೆ ಮುಟ್ಟಿಲ್ಲ ಎಂದು ಅಭಿಪ್ರಾಯ ಪಟ್ಟರು.
ಇನ್ನು ಯೋಗಿ ಆದಿತ್ಯನಾಥ್ ಮುಂದಿನ ಪ್ರಧಾನಿ ಅಭ್ಯರ್ಥಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಅಭ್ಯರ್ಥಿ ಆಗಬಾರದು ,.ದೇಶಕ್ಕೆ ಮೋದಿಯೇ ಮುಂದಿನ ಪ್ರಧಾನಿಯಾಗಬೇಕು. ಸಿಎಂ ಯೋಗಿ ಮೋದಿಯಷ್ಟು ಸಮರ್ಥರಲ್ಲ. ಆದಿತ್ಯನಾಥ್ ಅವರು ರಾಜಕಾರಣಿಯಲ್ಲ ಅವರು ಸಂತರು. ಸಂತ ಪರಂಪರೆಯ ವ್ಯಕ್ತಿ. ಉತ್ತರ ಪ್ರದೇಶದಲ್ಲಿ ಇಷ್ಟು ಕೆಲಸಗಳನ್ನು ಮಾಡಿರುವುದೇ ವಿಶೇಷ. ಆದರೆ ಅವರು ಈಗ ಪ್ರಧಾನಿ ಅಭ್ಯರ್ಥಿ ಆಗಬಾರದು ಎಂದು ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…