Featured

ಸಿಎಂ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ – vishwanews24

ಸಿಎಂ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೂಗು ಜೋರಾಗಿದೆ. ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಎರಡು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಪ್ರತಿಭಟನೆ ಹದ್ದು ಮೀರದಂತೆ ತಡೆಯಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದರು.

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಪ್ಲೆಕಾರ್ಡ್‌ಗಳನ್ನು ಪ್ರದರ್ಶಿಸಿ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿದರು. ಈ ವೇಳೆ ವಿಧಾನಸೌಧಕ್ಕೆ ಬೀಗ ಹಾಕಲು ಮುಂದಾದರು. ಆದರೆ ವಿಪಕ್ಷಗಳ ನಾಯಕರ ಯತ್ನವನ್ನು ಪೊಲೀಸರು ವಿಫಲಗೊಳಿಸಿದರು. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಸಿದರು.

ಪೊಲೀಸರ ಕಣ್ಣು ತಪ್ಪಿಸಿ ಬೀಗ ಹಾಕಲು ಅರವಿಂದ್ ಬೆಲ್ಲದ್ ಯತ್ನಿಸಿದರು. ಪೊಲೀಸರ ಕಣ್ತಪ್ಪಿಸಿ ದ್ವಾರಕ್ಕೆ ಬೀಗ ಹಾಕಲು ಕಸರತ್ತು ನಡೆಸಿದರು. ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮೆಗಾ ಡ್ರಾಮಾವೇ ನಡೆಯಿತು. ಆಗ ಪೊಲೀಸರೇ ಬಾಗಿಲು ಮುಚ್ಚಿ ಬೆಲ್ಲದ್ ಅವರನ್ನು ತಡೆದರು. ಕೊನೆಗೆ ಪ್ರತಿಭಟನಾಕಾರರನ್ನು ಬಸ್‌ನಲ್ಲಿ ತುಂಬಿಕೊಂಡು ಪೊಲೀಸರು ಹೊರಟರು.

ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಗೋವಿಂದ ಕಾರಜೋಳ, ಛಲವಾದಿ ನಾರಾಯಣಸ್ವಾಮಿ, ಸುನೀಲ್ ಕುಮಾರ್, ರವಿಕುಮಾರ್, ಜಗ್ಗೇಶ್, ಬೆಲ್ಲದ್, ಬಿ.ಸಿ.ಪಾಟೀಲ್, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ, ಹರೀಶ್ ಪೂಂಜಾ, ಗೋಪಾಲಯ್ಯ, ಮಹೇಶ್ ತೆಂಗಿನಕಾಯಿ, ಬಿ ಪಿ ಹರೀಶ್, ಸಿ.ಪಿ.ಯೋಗೇಶ್ವರ್, ಯಶ್‌ಪಾಲ್ ಸುವರ್ಣ ಸೇರಿ ಬಿಜೆಪಿ ಜೆಡಿಎಸ್‌ನ 55 ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago