ಬೆಂಗಳೂರು: ಮುಡಾ ಹಗರಣ ಸಂಬಂಧ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೂಗು ಜೋರಾಗಿದೆ. ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಎರಡು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಪ್ರತಿಭಟನೆ ಹದ್ದು ಮೀರದಂತೆ ತಡೆಯಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದರು.
ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಪ್ಲೆಕಾರ್ಡ್ಗಳನ್ನು ಪ್ರದರ್ಶಿಸಿ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿದರು. ಈ ವೇಳೆ ವಿಧಾನಸೌಧಕ್ಕೆ ಬೀಗ ಹಾಕಲು ಮುಂದಾದರು. ಆದರೆ ವಿಪಕ್ಷಗಳ ನಾಯಕರ ಯತ್ನವನ್ನು ಪೊಲೀಸರು ವಿಫಲಗೊಳಿಸಿದರು. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಸಿದರು.
ಪೊಲೀಸರ ಕಣ್ಣು ತಪ್ಪಿಸಿ ಬೀಗ ಹಾಕಲು ಅರವಿಂದ್ ಬೆಲ್ಲದ್ ಯತ್ನಿಸಿದರು. ಪೊಲೀಸರ ಕಣ್ತಪ್ಪಿಸಿ ದ್ವಾರಕ್ಕೆ ಬೀಗ ಹಾಕಲು ಕಸರತ್ತು ನಡೆಸಿದರು. ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮೆಗಾ ಡ್ರಾಮಾವೇ ನಡೆಯಿತು. ಆಗ ಪೊಲೀಸರೇ ಬಾಗಿಲು ಮುಚ್ಚಿ ಬೆಲ್ಲದ್ ಅವರನ್ನು ತಡೆದರು. ಕೊನೆಗೆ ಪ್ರತಿಭಟನಾಕಾರರನ್ನು ಬಸ್ನಲ್ಲಿ ತುಂಬಿಕೊಂಡು ಪೊಲೀಸರು ಹೊರಟರು.
ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಗೋವಿಂದ ಕಾರಜೋಳ, ಛಲವಾದಿ ನಾರಾಯಣಸ್ವಾಮಿ, ಸುನೀಲ್ ಕುಮಾರ್, ರವಿಕುಮಾರ್, ಜಗ್ಗೇಶ್, ಬೆಲ್ಲದ್, ಬಿ.ಸಿ.ಪಾಟೀಲ್, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ, ಹರೀಶ್ ಪೂಂಜಾ, ಗೋಪಾಲಯ್ಯ, ಮಹೇಶ್ ತೆಂಗಿನಕಾಯಿ, ಬಿ ಪಿ ಹರೀಶ್, ಸಿ.ಪಿ.ಯೋಗೇಶ್ವರ್, ಯಶ್ಪಾಲ್ ಸುವರ್ಣ ಸೇರಿ ಬಿಜೆಪಿ ಜೆಡಿಎಸ್ನ 55 ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…