Featured

ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ -Vishwanews24

ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ  ಸಿದ್ದರಾಮಯ್ಯ ಒತ್ತಾಯ -Vishwanews24

ಬೆಂಗಳೂರು : ಮುಖ್ಯಮಂತ್ರಿಗಳ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂಬುದಾಗಿ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ದರಾಗಿ ಉಳಿಯಬೇಕು. ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ.

ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು. ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ‌ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ಮೋದಿ ಮತ್ತು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, ‘ನಾ ಖಾವುಂಗಾ, ನಾ ಖಾನೆ ದೂಂಗಾ’ ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು ಬ ‘ಮೈ ಬಿ ಖಾವೂಂಗಾ, ತುಮ್ ಬಿ ಖಾವೋ’ ಎಂದು ಬದಲಿಸಿ ಬಿಡಿ. ಆಪರೇಷನ್ ಕಮಲ‌ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ‌ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ ಎಂದು ಹೇಳಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ‌ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರಸ್ವರೂಪದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago