ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ , ನಮ್ಮದು ಒಂದೇ ಕುಟುಂಬ : ಕೆ.ಎಸ್.ಈಶ್ವರಪ್ಪ -Vishwanews24

Featured, ರಾಜ್ಯ ನ್ಯೂಸ್

ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ , ನಮ್ಮದು ಒಂದೇ ಕುಟುಂಬ : ಕೆ.ಎಸ್.ಈಶ್ವರಪ್ಪ -Vishwanews24

ಯಡಿಯೂರಪ್ಪ ನಮ್ಮ ನಾಯಕ, ನಮ್ಮ ಸಿಎಂ..

ಬೆಂಗಳೂರು : ನಾನು ಸಿಎಂ ಯಡಿಯೂರಪ್ಪ ಇಂದು, ಮುಂದು ಯಾವತ್ತೂ ದೂರು ನೀಡಿಲ್ಲ. ದೂರು ನೀಡೋದು ಇಲ್ಲ. ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪದ ಬಗ್ಗೆ ಸ್ಪಷ್ಟೀಕರಣಕ್ಕಾಗಿ ಗವರ್ನರ್ ಬಳಿ ಹೋಗಿದ್ದೆ. ನಮ್ಮದು ಒಂದೇ ಕುಟುಂಬ ಎಂಬುದಾಗಿ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಜೀವನದಲ್ಲಿ ನಾನು ಸ್ಪೋಟ ಆಗಲ್ಲ. ಸತ್ಯ ಕಂಡಾಗ ನಾನು ಮುನ್ನುಗ್ಗುವವನೇ. ಕುತ್ತಿಗೆ ಕುಯ್ದರೂ ನಾನು ದಾರಿ ತಪ್ಪುವುದಿಲ್ಲ. ಸಿಟಿ ರವಿ, ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಗಮನಕ್ಕೆ ತಂದಿದ್ದೇನೆ. ಇದರ ಬದಲಾಗಿ ಹೆಚ್ ಡಿ ದೇವೇಗೌಡ, ಡಿಕೆ ಶಿವಕುಮಾರ್ ಗೆ ದೂರು ಕೊಡೋಕೆ ಆಗುತ್ತಾ ಎಂಬುದಾಗಿ ಪ್ರಶ್ನಿಸಿದರು.

ಕಾಪು ಬಿಜೆಪಿ ಮಂಡಳ- ಬಿಜೆಪಿ ಯುವಮೋರ್ಚ ವತಿಯಿಂದ ಹುತಾತ್ಮ ಯೋಧರಿಗೆ ನುಡಿನಮನ ಕಾರ್ಯಕ್ರಮ -Vishwanews24

ಯಡಿಯೂರಪ್ಪ ನಮ್ಮ ನಾಯಕ, ನಮ್ಮ ಸಿಎಂ. ನಮ್ಮದು ಒಂದೇ ಕುಟುಂಬ. ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ. ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡುವಂತಿಲ್ಲ. ಸ್ಪಷ್ಟೀಕರಣಕ್ಕಾಗಿ ಗವರ್ನರ್ ಬಳಿ ಹೋಗಿದ್ದೆ ಅಷ್ಟೇ. ಯಡಿಯೂರಪ್ಪ ಬದಲಾವಣೆ ಆಗುವುದಿಲ್ಲ. ಈಗಲೂ ಬಿಎಸ್ ಯಡಿಯೂರಪ್ಪ ನಮ್ಮ ನಾಯಕರು. ನಾನು ಸಿಎಂ ವಿರುದ್ಧ ದೂರು ಕೊಟ್ಟಿಲ್ಲ. ಮುಂದೆಯೂ ಬಿಎಸ್ ಯಡಿಯೂರಪ್ಪ ವಿರುದ್ಧ ದೂರು ಕೊಡಲ್ಲ ಎಂಬುದಾಗಿ ಹೇಳಿದರು.

ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಬಿಗ್ ಶಾಕ್ ವೇತನ ತಡೆಗೆ ಮುಂದಾದ ಸರ್ಕಾರ ! Vishwanews24