Featured

ಸಿಎಂ ವಿರುದ್ಧ #MeToo ಆರೋಪ : ಎಚ್‍ಡಿಕೆ ವಿರುದ್ಧ ಬಾಂಬ್ ಸಿಡಿಸಿದ ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಬಾಲಿವುಡ್, ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಬೀಸಿದ್ದ ಮೀ ಟೂ ಅಭಿಯಾನ ಇದೀಗ ರಾಜಕೀಯ ರಂಗಕ್ಕೂ ಪ್ರವೇಶಿಸಲು ಬಿಜೆಪಿ ಮುಖಂಡ, ಶಾಸಕ ಕುಮಾರ್ ಬಂಗಾರಪ್ಪ ವೇದಿಕೆ ಹಾಕಿಕೊಟ್ಟಿದ್ದಾರೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರೇ ನೀವೂ ಕೂಡಾ ಮೀ ಟೂ ಅಭಿಯಾನದಲ್ಲಿ ಸಿಕ್ಕಿಹಾಕಿಕೊಳ್ಳುತ್ತೀರಿ ಎಚ್ಚರ ಎಂದು ಹೇಳುವ ಮೂಲಕ ಬಾಂಬ್ ಸಿಡಿಸಿದ್ದಾರೆ.

ರಾಧಿಕಾ ಕುಮಾರಸ್ವಾಮಿಯವರು ತಾವು ಕುಮಾರಸ್ವಾಮಿ ಪತ್ನಿ ಎಂದು ಹೇಳಿಕೊಂಡಿದ್ದಾರೆ. ಅವರ ಮಗಳ ಜೊತೆ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಿಸಿದ, ಒಟ್ಟಿಗೆ ಇರುವ ಫೋಟೋಗಳು ಕಾಣಿಸಿಕೊಂಡಿವೆ. ಸಿಎಂ ಕುಮಾರಸ್ವಾಮಿಯವರು ಏಕೆ ಸಾಮಾಜಿಕವಾಗಿ ಎಲ್ಲರ ಮುಂದೆ ಅವರನ್ನು ಕರೆದುಕೊಂಡು ಬರುತ್ತಿಲ್ಲ, ಏಕೆ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆದುಕೊಂಡು ಹೋಗುವುದಿಲ್ಲ. ಅವರ ಕುಟುಂಬ ಸದಸ್ಯರನ್ನು ಜಿಲ್ಲಾ ಪಂಚಾಯತ್ ಸದಸ್ಯರನ್ನಾಗಿ ಮಾಡ್ತಾರೆ, ರಾಮನಗರದಲ್ಲಿ ಪಕ್ಷದಿಂದ ಟಿಕೆಟ್ ನೀಡಿ ಚುನಾವಣೆಗೆ ನಿಲ್ಲಿಸುತ್ತಾರೆ, ಹಾಗಾದರೆ ಇವರನ್ನೇಕೆ ಎಲ್ಲರ ಮುಂದೆ ಕುಟುಂಬ ಸದಸ್ಯರೆಂದು ಒಪ್ಪಿಕೊಳ್ಳುತ್ತಿಲ್ಲ ಎಂದು ಕೇಳಿದರು.

ಸೆಕ್ಷನ್ 497 ನಡಿ ವಿವಾಹಿತ ಪುರುಷ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡರೆ ಅದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ಕೊಟ್ಟಿದೆ. ಕಾನೂನಿನಲ್ಲಿಯೇ ಮಾನ್ಯತೆ ಸಿಕ್ಕಿರುವಾಗ ನಿಮಗೇಕೆ ಭಯ ಕುಮಾರಸ್ವಾಮಿಯವರೇ ಎಂದು ಕುಮಾರ ಬಂಗಾರಪ್ಪ ಪ್ರಶ್ನಿಸಿದ್ದಾರೆ.

ಹೆಸರು ರಾಧಿಕಾ ಕುಮಾರಸ್ವಾಮಿ ಅಂತ ಬಳಸಿಕೊಳ್ಳುತ್ತಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಕೂಡಾ ಹಾಕಿಕೊಂಡಿದ್ದಾರೆ. ಹೀಗಾಗಿ ಯಾರಿಗೆ ಶೋಷಣೆಯಾಗಿದೆಯೋ ಅವರು ದೂರು ನೀಡಿದರೆ, ನೀವೂ ಕೂಡಾ ಮೀ ಟೂ ಆರೋಪದಡಿ ಸಿಲುಕಿಕೊಳ್ಳುತ್ತೀರಿ ಎಂದರು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

13 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

23 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

41 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

46 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

53 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago