ಶಿವಮೊಗ್ಗ: ಬಾಲಿವುಡ್, ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಬೀಸಿದ್ದ ಮೀ ಟೂ ಅಭಿಯಾನ ಇದೀಗ ರಾಜಕೀಯ ರಂಗಕ್ಕೂ ಪ್ರವೇಶಿಸಲು ಬಿಜೆಪಿ ಮುಖಂಡ, ಶಾಸಕ ಕುಮಾರ್ ಬಂಗಾರಪ್ಪ ವೇದಿಕೆ ಹಾಕಿಕೊಟ್ಟಿದ್ದಾರೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರೇ ನೀವೂ ಕೂಡಾ ಮೀ ಟೂ ಅಭಿಯಾನದಲ್ಲಿ ಸಿಕ್ಕಿಹಾಕಿಕೊಳ್ಳುತ್ತೀರಿ ಎಚ್ಚರ ಎಂದು ಹೇಳುವ ಮೂಲಕ ಬಾಂಬ್ ಸಿಡಿಸಿದ್ದಾರೆ.
ರಾಧಿಕಾ ಕುಮಾರಸ್ವಾಮಿಯವರು ತಾವು ಕುಮಾರಸ್ವಾಮಿ ಪತ್ನಿ ಎಂದು ಹೇಳಿಕೊಂಡಿದ್ದಾರೆ. ಅವರ ಮಗಳ ಜೊತೆ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಿಸಿದ, ಒಟ್ಟಿಗೆ ಇರುವ ಫೋಟೋಗಳು ಕಾಣಿಸಿಕೊಂಡಿವೆ. ಸಿಎಂ ಕುಮಾರಸ್ವಾಮಿಯವರು ಏಕೆ ಸಾಮಾಜಿಕವಾಗಿ ಎಲ್ಲರ ಮುಂದೆ ಅವರನ್ನು ಕರೆದುಕೊಂಡು ಬರುತ್ತಿಲ್ಲ, ಏಕೆ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆದುಕೊಂಡು ಹೋಗುವುದಿಲ್ಲ. ಅವರ ಕುಟುಂಬ ಸದಸ್ಯರನ್ನು ಜಿಲ್ಲಾ ಪಂಚಾಯತ್ ಸದಸ್ಯರನ್ನಾಗಿ ಮಾಡ್ತಾರೆ, ರಾಮನಗರದಲ್ಲಿ ಪಕ್ಷದಿಂದ ಟಿಕೆಟ್ ನೀಡಿ ಚುನಾವಣೆಗೆ ನಿಲ್ಲಿಸುತ್ತಾರೆ, ಹಾಗಾದರೆ ಇವರನ್ನೇಕೆ ಎಲ್ಲರ ಮುಂದೆ ಕುಟುಂಬ ಸದಸ್ಯರೆಂದು ಒಪ್ಪಿಕೊಳ್ಳುತ್ತಿಲ್ಲ ಎಂದು ಕೇಳಿದರು.
ಸೆಕ್ಷನ್ 497 ನಡಿ ವಿವಾಹಿತ ಪುರುಷ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡರೆ ಅದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ಕೊಟ್ಟಿದೆ. ಕಾನೂನಿನಲ್ಲಿಯೇ ಮಾನ್ಯತೆ ಸಿಕ್ಕಿರುವಾಗ ನಿಮಗೇಕೆ ಭಯ ಕುಮಾರಸ್ವಾಮಿಯವರೇ ಎಂದು ಕುಮಾರ ಬಂಗಾರಪ್ಪ ಪ್ರಶ್ನಿಸಿದ್ದಾರೆ.
ಹೆಸರು ರಾಧಿಕಾ ಕುಮಾರಸ್ವಾಮಿ ಅಂತ ಬಳಸಿಕೊಳ್ಳುತ್ತಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಕೂಡಾ ಹಾಕಿಕೊಂಡಿದ್ದಾರೆ. ಹೀಗಾಗಿ ಯಾರಿಗೆ ಶೋಷಣೆಯಾಗಿದೆಯೋ ಅವರು ದೂರು ನೀಡಿದರೆ, ನೀವೂ ಕೂಡಾ ಮೀ ಟೂ ಆರೋಪದಡಿ ಸಿಲುಕಿಕೊಳ್ಳುತ್ತೀರಿ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…