Featured

ಸಿಎಂ ವಿರುದ್ಧ #MeToo ಆರೋಪ : ಎಚ್‍ಡಿಕೆ ವಿರುದ್ಧ ಬಾಂಬ್ ಸಿಡಿಸಿದ ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಬಾಲಿವುಡ್, ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಬೀಸಿದ್ದ ಮೀ ಟೂ ಅಭಿಯಾನ ಇದೀಗ ರಾಜಕೀಯ ರಂಗಕ್ಕೂ ಪ್ರವೇಶಿಸಲು ಬಿಜೆಪಿ ಮುಖಂಡ, ಶಾಸಕ ಕುಮಾರ್ ಬಂಗಾರಪ್ಪ ವೇದಿಕೆ ಹಾಕಿಕೊಟ್ಟಿದ್ದಾರೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರೇ ನೀವೂ ಕೂಡಾ ಮೀ ಟೂ ಅಭಿಯಾನದಲ್ಲಿ ಸಿಕ್ಕಿಹಾಕಿಕೊಳ್ಳುತ್ತೀರಿ ಎಚ್ಚರ ಎಂದು ಹೇಳುವ ಮೂಲಕ ಬಾಂಬ್ ಸಿಡಿಸಿದ್ದಾರೆ.

ರಾಧಿಕಾ ಕುಮಾರಸ್ವಾಮಿಯವರು ತಾವು ಕುಮಾರಸ್ವಾಮಿ ಪತ್ನಿ ಎಂದು ಹೇಳಿಕೊಂಡಿದ್ದಾರೆ. ಅವರ ಮಗಳ ಜೊತೆ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಿಸಿದ, ಒಟ್ಟಿಗೆ ಇರುವ ಫೋಟೋಗಳು ಕಾಣಿಸಿಕೊಂಡಿವೆ. ಸಿಎಂ ಕುಮಾರಸ್ವಾಮಿಯವರು ಏಕೆ ಸಾಮಾಜಿಕವಾಗಿ ಎಲ್ಲರ ಮುಂದೆ ಅವರನ್ನು ಕರೆದುಕೊಂಡು ಬರುತ್ತಿಲ್ಲ, ಏಕೆ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆದುಕೊಂಡು ಹೋಗುವುದಿಲ್ಲ. ಅವರ ಕುಟುಂಬ ಸದಸ್ಯರನ್ನು ಜಿಲ್ಲಾ ಪಂಚಾಯತ್ ಸದಸ್ಯರನ್ನಾಗಿ ಮಾಡ್ತಾರೆ, ರಾಮನಗರದಲ್ಲಿ ಪಕ್ಷದಿಂದ ಟಿಕೆಟ್ ನೀಡಿ ಚುನಾವಣೆಗೆ ನಿಲ್ಲಿಸುತ್ತಾರೆ, ಹಾಗಾದರೆ ಇವರನ್ನೇಕೆ ಎಲ್ಲರ ಮುಂದೆ ಕುಟುಂಬ ಸದಸ್ಯರೆಂದು ಒಪ್ಪಿಕೊಳ್ಳುತ್ತಿಲ್ಲ ಎಂದು ಕೇಳಿದರು.

ಸೆಕ್ಷನ್ 497 ನಡಿ ವಿವಾಹಿತ ಪುರುಷ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡರೆ ಅದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ಕೊಟ್ಟಿದೆ. ಕಾನೂನಿನಲ್ಲಿಯೇ ಮಾನ್ಯತೆ ಸಿಕ್ಕಿರುವಾಗ ನಿಮಗೇಕೆ ಭಯ ಕುಮಾರಸ್ವಾಮಿಯವರೇ ಎಂದು ಕುಮಾರ ಬಂಗಾರಪ್ಪ ಪ್ರಶ್ನಿಸಿದ್ದಾರೆ.

ಹೆಸರು ರಾಧಿಕಾ ಕುಮಾರಸ್ವಾಮಿ ಅಂತ ಬಳಸಿಕೊಳ್ಳುತ್ತಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಕೂಡಾ ಹಾಕಿಕೊಂಡಿದ್ದಾರೆ. ಹೀಗಾಗಿ ಯಾರಿಗೆ ಶೋಷಣೆಯಾಗಿದೆಯೋ ಅವರು ದೂರು ನೀಡಿದರೆ, ನೀವೂ ಕೂಡಾ ಮೀ ಟೂ ಆರೋಪದಡಿ ಸಿಲುಕಿಕೊಳ್ಳುತ್ತೀರಿ ಎಂದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago