ರಾಜ್ಯ ನ್ಯೂಸ್

ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಬಿಜೆಪಿ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಹಿಂದೇಟು : ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ:vishwanews24 https://www.vishwanews24.com/?p=59131

ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಬಿಜೆಪಿ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಹಿಂದೇಟು : ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ:vishwanews24

ರಾಜ್ಯ ನ್ಯೂಸ್:  ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದ್ದು, ಈ ಹೊತ್ತಿನಲ್ಲಿಯೇ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ.ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ. ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ.

ಈ ಎಲ್ಲದರ ಮಧ್ಯೆ ಶಾಲೆಗಳ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಈ ಬಾರಿಯೂ ರಾಜ್ಯದ ಮಕ್ಕಳಿಗೆ ಸೈಕಲ್ ಭಾಗ್ಯ ಇಲ್ಲ. ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಕುಂಟು ನೆಪವನ್ನು ಹೇಳುತ್ತಿದೆ.

ಬಜೆಟ್‍ನಲ್ಲಿ ಅನುದಾನ ಮೀಸಲಿಡದ ಕಾರಣ 2022-23ನೇ ಸಾಲಿನ ಮಕ್ಕಳಿಗೆ ಸೈಕಲ್ ವಿತರಿಸುತ್ತಿಲ್ಲ. ಆರ್ಥಿಕ ಕೊರತೆಯ ನೆಪವೊಡ್ಡಿ ಸೈಕಲ್ ಯೋಜನೆಗೆ ಸರ್ಕಾರ ಬ್ರೇಕ್ ಹಾಕಿದೆ. ಸೈಕಲ್ ವಿತರಿಸಲು ಕುಂಟು ನೆಪ ಹೇಳುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

15 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

15 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

16 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

18 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

18 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

18 hours ago