ರಾಜ್ಯ ನ್ಯೂಸ್: ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದ್ದು, ಈ ಹೊತ್ತಿನಲ್ಲಿಯೇ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ.ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ. ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ.
ಈ ಎಲ್ಲದರ ಮಧ್ಯೆ ಶಾಲೆಗಳ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಈ ಬಾರಿಯೂ ರಾಜ್ಯದ ಮಕ್ಕಳಿಗೆ ಸೈಕಲ್ ಭಾಗ್ಯ ಇಲ್ಲ. ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಕುಂಟು ನೆಪವನ್ನು ಹೇಳುತ್ತಿದೆ.
ಬಜೆಟ್ನಲ್ಲಿ ಅನುದಾನ ಮೀಸಲಿಡದ ಕಾರಣ 2022-23ನೇ ಸಾಲಿನ ಮಕ್ಕಳಿಗೆ ಸೈಕಲ್ ವಿತರಿಸುತ್ತಿಲ್ಲ. ಆರ್ಥಿಕ ಕೊರತೆಯ ನೆಪವೊಡ್ಡಿ ಸೈಕಲ್ ಯೋಜನೆಗೆ ಸರ್ಕಾರ ಬ್ರೇಕ್ ಹಾಕಿದೆ. ಸೈಕಲ್ ವಿತರಿಸಲು ಕುಂಟು ನೆಪ ಹೇಳುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…