Featured

ಬಿ.ಎಸ್‌. ವೈ  ಅವರು ತಕ್ಷಣವೇ  ರಾಜೀನಾಮೆ ನೀಡಬೇಕು,  ಇಲ್ಲವಾದಲ್ಲಿ ಕಾಂಗ್ರೆಸ್‌ ಬೀದಿಗಿಳಿದು ಹೋರಾಟ : ಸಿದ್ದರಾಮಯ್ಯ – Vishwanews24

ಬಿ.ಎಸ್‌. ವೈ  ಅವರು ತಕ್ಷಣವೇ  ರಾಜೀನಾಮೆ ನೀಡಬೇಕು,  ಇಲ್ಲವಾದಲ್ಲಿ ಕಾಂಗ್ರೆಸ್‌ ಬೀದಿಗಿಳಿದು ಹೋರಾಟ : ಸಿದ್ದರಾಮಯ್ಯ – Vishwanews24

ಬೆಂಗಳೂರು, : “ಸಿಎಂ ಸ್ಥಾನಕ್ಕೆ ತಕ್ಷಣವೇ ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್‌ ಬೀದಿಗಿಳಿದು ಹೋರಾಟ ಮಾಡಲಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಅಕ್ರಮವಾಗಿ ಡಿನೋಟಿಫಿಕೇಷನ್‌‌‌‌‌‌ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್‌‌.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಹೈಕೋಟ್‌‌ನಲ್ಲಿ ವಜಾಗೊಂಡ ಕಾರಣ ತಮ್ಮ ಸ್ಥಾನಕ್ಕೆ ಸಿಎಂ ಬಿಎಸ್‌ವೈ ಅವರು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಯಡಿಯೂರಪ್ಪ ಅವರು ರಾಜೀನಾಮೆ ನೀಡಿ ಸುಪ್ರೀಂ ಕೋರ್ಟ್‌ಗೆ ಹೋಗಿ ಕ್ಲೀನ್‌‌ ಚಿಟ್‌ ಪಡೆದುಕೊಂದು ಪುನಃ ಸಿಎಂ ಆಗಲಿ. ಇಲ್ಲದಿದ್ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ ನಾ ಖಾವುಂಗ ನಾ ಖಾನೆ ದೂಂಗಾ ಎನ್ನುವ ಮಾತಿಗೆ ಅರ್ಥವೆಲ್ಲಿದೆ?. ತಮ್ಮ ಸ್ಥಾನಕ್ಕೆ ಯಡಿಯೂರಪ್ಪ ಅವರು ರಾಜೀನಾಮೆ ನೀಡದೇ ಇದ್ದಲ್ಲಿ ನರೇಂದ್ರ ಮೋದಿ ಅವರೇ ರಾಜೀನಾಮೆ ಪಡೆಯಬೇಕು” ಎಂದಿದ್ದಾರೆ.

2019ರಲ್ಲಿ ಯಡಿಯೂರಪ್ಪ ಅವರು, ತಮ್ಮ ವಿರುದ್ದದ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌‌ ಹಾಗೂ ಈ ವಿಚಾರದ ಸಂಬಂಧ ನಡೆದಿರುವ ಲೋಕಾಯುಕ್ತ ಕೋರ್ಟ್‌‌ ವಿಚಾರಣೆಯನ್ನು ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ತಕರಾರು ಅರ್ಜಿಯನ್ನು ನ್ಯಾ.ಜಾನ್‌‌ ಮೈಕೆಲ್‌‌‌‌‌ ಕುನ್ಹಾ ಅವರಿದ್ದ ಏಕ ಸದಸ್ಯ ಪೀಠವು ವಜಾಗೊಳಿಸಿತ್ತು.

 

Vishwa News 24

Recent Posts

ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ – vishwanews24

 ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ ಬೆಂಗಳೂರು: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌…

8 minutes ago

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ – vishwanews24

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ…

16 minutes ago

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

21 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

21 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

21 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

22 hours ago