ಬೆಂಗಳೂರು : “ಪೊಲೀಸರು ತಮ್ಮನ್ನು ತಾವು ರಕ್ಷಿಸಲು ಮಂಗಳೂರು ಗೋಲಿಬಾರ್ನಲ್ಲಿ ಬಲಿಯಾದವರನ್ನು ಆರೋಪಿಗಳು ಎಂದು ಹೇಳುತ್ತಿದ್ದಾರೆ” ಎಂದು ಪರಿಷತ್ ಸದಸ್ಯ ಐವನ್ ಡಿಸೋಜ ಆರೋಪಿಸಿದ್ದಾರೆ.
ಮಂಗಳವಾರ ಪರಿಷತ್ತಿನಲ್ಲಿ ಮಾತನಾಡಿದ ಅವರು, “ಮಂಗಳೂರು ಗೋಲಿಬಾರ್ನಲ್ಲಿ ಇಬ್ಬರು ಬಲಿಯಾಗಿದ್ದಾರೆ. ಆದರೆ ಪೊಲೀಸರು ಪಾರಾಗಲು ಈ ಬಲಿಯಾದವರು ಆರೋಪಿಗಳು ಎಂದು ಪಟ್ಟ ಕಟ್ಟಲು ಮುಂದಾಗಿದ್ದರು. ಇದು ಅತ್ಯಂತ ಅಮಾನವೀಯ ಕೆಲಸ” ಎಂದರು.
“ಮುಖ್ಯಮಂತ್ರಿ, ಉಸ್ತುವಾರಿ ಸಚಿವ, ಸ್ಥಳೀಯ ಶಾಸಕ, ಸಂಸದ ಎಲ್ಲರೂ ಬಿಜೆಪಿಯವರೇ ಆಗಿದ್ದಾರೆ. ಆದರೆ ಅವರಿಗೆ ಗೋಲಿಬಾರ್ನಲ್ಲಿ ಮೃತಪಟ್ಟವರ ಮನೆಗೆ ಭೇಟಿ ನೀಡಲು ಈವರೆಗೂ ಸಾಧ್ಯವಾಗಿಲ್ಲ. ಅಷ್ಟು ಮಾತ್ರವಲ್ಲದೆ ಮೃತರ ಕುಟುಂಬಕ್ಕೆ ಪರಿಹಾರ ಹಣದ ಚೆಕ್ ನೀಡುತ್ತೇವೆ ಎಂದು ಕರೆಸಿಕೊಂಡು ಅಮಾನವೀಯವಾಗಿ ವರ್ತಿಸಿದ್ದಾರೆ” ಎಂದು ಅವರು ಆರೋಪಿಸಿದರು.
“ನೆರೆ ರಾಜ್ಯ ಕೇರಳದಿಂದ ಬಂದವರು ಮಂಗಳೂರು ಗೋಲಿಬಾರ್ಗೆ ಕಾರಣ ಎಂದು ಹೇಳುತ್ತಿದ್ದಾರೆ. ಆದರೆ ಈವರೆಗೂ ಕೇರಳದ ಯಾರನ್ನೂ ಬಂಧನ ಮಾಡಿಲ್ಲ. ಸಿಎಎ, ಎನ್ಆರ್ಸಿ ವಿರುದ್ಧವಾಗಿ ಮಾತನಾಡುವ ಎಲ್ಲರನ್ನೂ ದೇಶದ್ರೋಹಿಗಳು ಎಂದು ಹೇಳುವುದು ಸರಿಯಲ್ಲ” ಎಂದು ಹೇಳಿದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…