ಬೆಂಗಳೂರು : “ಪೊಲೀಸರು ತಮ್ಮನ್ನು ತಾವು ರಕ್ಷಿಸಲು ಮಂಗಳೂರು ಗೋಲಿಬಾರ್ನಲ್ಲಿ ಬಲಿಯಾದವರನ್ನು ಆರೋಪಿಗಳು ಎಂದು ಹೇಳುತ್ತಿದ್ದಾರೆ” ಎಂದು ಪರಿಷತ್ ಸದಸ್ಯ ಐವನ್ ಡಿಸೋಜ ಆರೋಪಿಸಿದ್ದಾರೆ.
ಮಂಗಳವಾರ ಪರಿಷತ್ತಿನಲ್ಲಿ ಮಾತನಾಡಿದ ಅವರು, “ಮಂಗಳೂರು ಗೋಲಿಬಾರ್ನಲ್ಲಿ ಇಬ್ಬರು ಬಲಿಯಾಗಿದ್ದಾರೆ. ಆದರೆ ಪೊಲೀಸರು ಪಾರಾಗಲು ಈ ಬಲಿಯಾದವರು ಆರೋಪಿಗಳು ಎಂದು ಪಟ್ಟ ಕಟ್ಟಲು ಮುಂದಾಗಿದ್ದರು. ಇದು ಅತ್ಯಂತ ಅಮಾನವೀಯ ಕೆಲಸ” ಎಂದರು.
“ಮುಖ್ಯಮಂತ್ರಿ, ಉಸ್ತುವಾರಿ ಸಚಿವ, ಸ್ಥಳೀಯ ಶಾಸಕ, ಸಂಸದ ಎಲ್ಲರೂ ಬಿಜೆಪಿಯವರೇ ಆಗಿದ್ದಾರೆ. ಆದರೆ ಅವರಿಗೆ ಗೋಲಿಬಾರ್ನಲ್ಲಿ ಮೃತಪಟ್ಟವರ ಮನೆಗೆ ಭೇಟಿ ನೀಡಲು ಈವರೆಗೂ ಸಾಧ್ಯವಾಗಿಲ್ಲ. ಅಷ್ಟು ಮಾತ್ರವಲ್ಲದೆ ಮೃತರ ಕುಟುಂಬಕ್ಕೆ ಪರಿಹಾರ ಹಣದ ಚೆಕ್ ನೀಡುತ್ತೇವೆ ಎಂದು ಕರೆಸಿಕೊಂಡು ಅಮಾನವೀಯವಾಗಿ ವರ್ತಿಸಿದ್ದಾರೆ” ಎಂದು ಅವರು ಆರೋಪಿಸಿದರು.
“ನೆರೆ ರಾಜ್ಯ ಕೇರಳದಿಂದ ಬಂದವರು ಮಂಗಳೂರು ಗೋಲಿಬಾರ್ಗೆ ಕಾರಣ ಎಂದು ಹೇಳುತ್ತಿದ್ದಾರೆ. ಆದರೆ ಈವರೆಗೂ ಕೇರಳದ ಯಾರನ್ನೂ ಬಂಧನ ಮಾಡಿಲ್ಲ. ಸಿಎಎ, ಎನ್ಆರ್ಸಿ ವಿರುದ್ಧವಾಗಿ ಮಾತನಾಡುವ ಎಲ್ಲರನ್ನೂ ದೇಶದ್ರೋಹಿಗಳು ಎಂದು ಹೇಳುವುದು ಸರಿಯಲ್ಲ” ಎಂದು ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…