ಬೆಂಗಳೂರು : “ಪೊಲೀಸರು ತಮ್ಮನ್ನು ತಾವು ರಕ್ಷಿಸಲು ಮಂಗಳೂರು ಗೋಲಿಬಾರ್ನಲ್ಲಿ ಬಲಿಯಾದವರನ್ನು ಆರೋಪಿಗಳು ಎಂದು ಹೇಳುತ್ತಿದ್ದಾರೆ” ಎಂದು ಪರಿಷತ್ ಸದಸ್ಯ ಐವನ್ ಡಿಸೋಜ ಆರೋಪಿಸಿದ್ದಾರೆ.
ಮಂಗಳವಾರ ಪರಿಷತ್ತಿನಲ್ಲಿ ಮಾತನಾಡಿದ ಅವರು, “ಮಂಗಳೂರು ಗೋಲಿಬಾರ್ನಲ್ಲಿ ಇಬ್ಬರು ಬಲಿಯಾಗಿದ್ದಾರೆ. ಆದರೆ ಪೊಲೀಸರು ಪಾರಾಗಲು ಈ ಬಲಿಯಾದವರು ಆರೋಪಿಗಳು ಎಂದು ಪಟ್ಟ ಕಟ್ಟಲು ಮುಂದಾಗಿದ್ದರು. ಇದು ಅತ್ಯಂತ ಅಮಾನವೀಯ ಕೆಲಸ” ಎಂದರು.
“ಮುಖ್ಯಮಂತ್ರಿ, ಉಸ್ತುವಾರಿ ಸಚಿವ, ಸ್ಥಳೀಯ ಶಾಸಕ, ಸಂಸದ ಎಲ್ಲರೂ ಬಿಜೆಪಿಯವರೇ ಆಗಿದ್ದಾರೆ. ಆದರೆ ಅವರಿಗೆ ಗೋಲಿಬಾರ್ನಲ್ಲಿ ಮೃತಪಟ್ಟವರ ಮನೆಗೆ ಭೇಟಿ ನೀಡಲು ಈವರೆಗೂ ಸಾಧ್ಯವಾಗಿಲ್ಲ. ಅಷ್ಟು ಮಾತ್ರವಲ್ಲದೆ ಮೃತರ ಕುಟುಂಬಕ್ಕೆ ಪರಿಹಾರ ಹಣದ ಚೆಕ್ ನೀಡುತ್ತೇವೆ ಎಂದು ಕರೆಸಿಕೊಂಡು ಅಮಾನವೀಯವಾಗಿ ವರ್ತಿಸಿದ್ದಾರೆ” ಎಂದು ಅವರು ಆರೋಪಿಸಿದರು.
“ನೆರೆ ರಾಜ್ಯ ಕೇರಳದಿಂದ ಬಂದವರು ಮಂಗಳೂರು ಗೋಲಿಬಾರ್ಗೆ ಕಾರಣ ಎಂದು ಹೇಳುತ್ತಿದ್ದಾರೆ. ಆದರೆ ಈವರೆಗೂ ಕೇರಳದ ಯಾರನ್ನೂ ಬಂಧನ ಮಾಡಿಲ್ಲ. ಸಿಎಎ, ಎನ್ಆರ್ಸಿ ವಿರುದ್ಧವಾಗಿ ಮಾತನಾಡುವ ಎಲ್ಲರನ್ನೂ ದೇಶದ್ರೋಹಿಗಳು ಎಂದು ಹೇಳುವುದು ಸರಿಯಲ್ಲ” ಎಂದು ಹೇಳಿದರು.
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…