ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆದಿದ್ದವು. ಆದರೆ, ಸಿಎಎಯಿಂದ ದೇಶದ ಅಲ್ಪಸಂಖ್ಯಾತರಿಗೆ ಯಾವುದೆ ತೊಂದರೆ ಆಗದು ಎನ್ನುವ ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿತ್ತು. ಈ ವೇಳೆ ಸಂಸದ ತೇಜಸ್ವಿ ಸೂರ್ಯ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸ್ಕೆಚ್ ನಡೆದಿತ್ತು ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.
ಡಿ. 22ರಂದು ಟೌನ್ಹಾಲ್ ಬಳಿ ಸಿಎಎ ಜಾಗೃತಿ ಜಾಥಾ ನಡೆದಿತ್ತು. ಇದರಲ್ಲಿ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಸೇರಿ ಅನೇಕ ಪ್ರಮುಖರು ಪಾಲ್ಗೊಂಡಿದ್ದರು. ಸಿಎಎ ಜಾಥಾ ಮುಗಿಸಿ ತೆರಳುವಾಗ ಆರ್ಎಸ್ಎಸ್ ಕಾರ್ಯಕರ್ತ ವರುಣ್ ಮೇಲೆ ಜೆ.ಸಿ ನಗರದ ರಸ್ತೆಯಲ್ಲಿ 6 ಜನ ಎಸ್ಡಿಪಿಐ ಕಾರ್ಯಕರ್ತರಿಂದ ಕೊಲೆಗೆ ಯತ್ನ ನಡೆದಿತ್ತು.
2 ಬೈಕ್ಗಳಲ್ಲಿ ಬಂದಿದ್ದ ಆರೋಪಿಗಳು ವರುಣ್ ಮೇಲೆ ರಾಡ್ ಹಾಗೂ ಲಾಂಗ್ಗಳಿಂದ ಹಲ್ಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಸಾಧಿಕ್, ಅಕ್ಬರ್ ಸೇರಿ ಆರು ಜನರನ್ನು ಪೊಲೀಸರು ಬಂಧನ ಮಾಡಿದ್ದರು.
ಈ ಆರೋಪಿಗಳ ವಿಚಾರಣೆಯಲ್ಲಿ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ. ವರುಣ್ ಅನ್ನು ಹತ್ಯೆ ಮಾಡುವ ಸಂಚು ಇರಲಿಲ್ಲ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯನ್ನು ಹತ್ಯೆ ಮಾಡುವುದು ನಮ್ಮ ಮುಖ್ಯ ಉದ್ದೇಶ ಆಗಿತ್ತು ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಬೆಂಗಳೂರಿನ ಪೋಲಿಸ್ ಆಯುಕ್ತ ಭಾಸ್ಕರ್ ರಾವ್ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…