Featured

ಸಿಎಸ್​ಕೆ ನಾಯಕತ್ವದಿಂದ ಕೆಳಗಿಳಿದ ಧೋನಿ : ನೂತನ ನಾಯಕನಾಗಿ ಋತುರಾಜ್‌ ಗಾಯಕ್ವಾಡ್‌  ನೇಮಕ – Vishwanews24

ಸಿಎಸ್​ಕೆ ನಾಯಕತ್ವದಿಂದ ಕೆಳಗಿಳಿದ ಧೋನಿ –  – ನೂತನ ನಾಯಕನಾಗಿ ಋತುರಾಜ್‌ ಗಾಯಕ್ವಾಡ್‌  ನೇಮಕ

ಚೆನ್ನೈ: ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕತ್ವದಿಂದ ಲೆಜೆಂಡ್‌ ಎಂ.ಎಸ್‌ ಧೋನಿ ಕೆಳಗಿಳಿದಿದ್ದಾರೆ. ಅವರ ಬದಲಿಗೆ ನೂತನ ನಾಯಕನಾಗಿ ಬಲಗೈ ಬ್ಯಾಟರ್‌ ಋತುರಾಜ್‌ ಗಾಯಕ್ವಾಡ್‌  ನೇಮಕಗೊಂಡಿದ್ದಾರೆ.

2024ರ ಐಪಿಎಲ್‌ ಟೂರ್ನಿ ಆರಂಭಕ್ಕೆ ಒಂದು ದಿನ ಮುಂಚಿತವಾಗಿಯೇ ಧೋನಿ ನಾಯಕ ಸ್ಥಾನದಿಂದ ಕೆಳಗಿಳಿದಿದ್ದು, 2024ರ ಟೂರ್ನಿಯಲ್ಲಿ ಋತುರಾಜ್‌ ಹಾಲಿ ಚಾಂಪಿಯನ್ಸ್‌ ಸಿಎಸ್‌ಕೆ ತಂಡವನ್ನು ಮುನ್ನಡೆಸಲಿದ್ದಾರೆ.

2019ರಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಲ್ಲಿರುವ ಋತುರಾಜ್‌ ಗಾಯಕ್ವಾಡ್ 52‌ ಪಂದ್ಯಗಳು 51 ಇನ್ನಿಂಗ್ಸ್‌ಗಳಲ್ಲಿ 1,797 ರನ್‌ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ, 14 ಅರ್ಧಶತಕ, 159 ಬೌಂಡರಿ, 73 ಸಿಕ್ಸರ್‌ಗಳನ್ನ ಒಳಗೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಉಸಿರು ಯಾರು ಎಂದು ಕೇಳಿದರೆ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ (Cricket Fans) ನಿಸ್ಸಂಶಯವಾಗಿ ಧೋನಿ ಹೆಸರನ್ನೇ ಹೇಳುತ್ತಾರೆ. 42 ವರ್ಷದ ಮಹಿ, 2008ರಲ್ಲಿ ಐಪಿಎಲ್‌ ಆರಂಭವಾದಾಗಿನಿಂದ ಚೆನ್ನೈ ತಂಡದ ನಾಯಕನಾಗಿದ್ದಾರೆ. 2013ರಿಂದ 2 ವರ್ಷಗಳ ತಂಡವನ್ನು ಅಮಾನತುಗೊಳಿಸಿದ್ದು, ಹೊರತುಪಡಿಸಿ ಉಳಿದ ಎಲ್ಲ ಆವೃತ್ತಿಗಳಲ್ಲೂ ಚೆನ್ನೈ ತಂಡದ ಪರವಾಗಿಯೇ ಆಡಿದ್ದಾರೆ.

2022ರ ಆವೃತ್ತಿಯಲ್ಲಿ ಧೋನಿ ತಮ್ಮ ನಾಯತ್ವ ತೊರೆದಿದ್ದರು. ಈ ವೇಳೆ ರವೀಂದ್ರ ಜಡೇಜಾ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಆದ್ರೆ ಸತತ ಸೋಲಿನಿಂದ ಬೇಸರಗೊಂಡ ರವೀಂದ್ರ ಜಡೇಜಾ, ಧೋನಿ ಅವರಿಗೆ ನಾಯಕ ಸ್ಥಾನವನ್ನು ಮರಳಿಸಿದ್ದರು. 2023ರ ಆವೃತ್ತಿಯಲ್ಲಿ ಮಹಿ ನಾಯಕತ್ವದಲ್ಲಿಯೇ ಚೆನ್ನೈ ತಂಡ 5ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

32 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 hour ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 hour ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago