Featured

ಸಿಎಸ್​ಕೆ ನಾಯಕತ್ವದಿಂದ ಕೆಳಗಿಳಿದ ಧೋನಿ : ನೂತನ ನಾಯಕನಾಗಿ ಋತುರಾಜ್‌ ಗಾಯಕ್ವಾಡ್‌  ನೇಮಕ – Vishwanews24

ಸಿಎಸ್​ಕೆ ನಾಯಕತ್ವದಿಂದ ಕೆಳಗಿಳಿದ ಧೋನಿ –  – ನೂತನ ನಾಯಕನಾಗಿ ಋತುರಾಜ್‌ ಗಾಯಕ್ವಾಡ್‌  ನೇಮಕ

ಚೆನ್ನೈ: ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕತ್ವದಿಂದ ಲೆಜೆಂಡ್‌ ಎಂ.ಎಸ್‌ ಧೋನಿ ಕೆಳಗಿಳಿದಿದ್ದಾರೆ. ಅವರ ಬದಲಿಗೆ ನೂತನ ನಾಯಕನಾಗಿ ಬಲಗೈ ಬ್ಯಾಟರ್‌ ಋತುರಾಜ್‌ ಗಾಯಕ್ವಾಡ್‌  ನೇಮಕಗೊಂಡಿದ್ದಾರೆ.

2024ರ ಐಪಿಎಲ್‌ ಟೂರ್ನಿ ಆರಂಭಕ್ಕೆ ಒಂದು ದಿನ ಮುಂಚಿತವಾಗಿಯೇ ಧೋನಿ ನಾಯಕ ಸ್ಥಾನದಿಂದ ಕೆಳಗಿಳಿದಿದ್ದು, 2024ರ ಟೂರ್ನಿಯಲ್ಲಿ ಋತುರಾಜ್‌ ಹಾಲಿ ಚಾಂಪಿಯನ್ಸ್‌ ಸಿಎಸ್‌ಕೆ ತಂಡವನ್ನು ಮುನ್ನಡೆಸಲಿದ್ದಾರೆ.

2019ರಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಲ್ಲಿರುವ ಋತುರಾಜ್‌ ಗಾಯಕ್ವಾಡ್ 52‌ ಪಂದ್ಯಗಳು 51 ಇನ್ನಿಂಗ್ಸ್‌ಗಳಲ್ಲಿ 1,797 ರನ್‌ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ, 14 ಅರ್ಧಶತಕ, 159 ಬೌಂಡರಿ, 73 ಸಿಕ್ಸರ್‌ಗಳನ್ನ ಒಳಗೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಉಸಿರು ಯಾರು ಎಂದು ಕೇಳಿದರೆ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ (Cricket Fans) ನಿಸ್ಸಂಶಯವಾಗಿ ಧೋನಿ ಹೆಸರನ್ನೇ ಹೇಳುತ್ತಾರೆ. 42 ವರ್ಷದ ಮಹಿ, 2008ರಲ್ಲಿ ಐಪಿಎಲ್‌ ಆರಂಭವಾದಾಗಿನಿಂದ ಚೆನ್ನೈ ತಂಡದ ನಾಯಕನಾಗಿದ್ದಾರೆ. 2013ರಿಂದ 2 ವರ್ಷಗಳ ತಂಡವನ್ನು ಅಮಾನತುಗೊಳಿಸಿದ್ದು, ಹೊರತುಪಡಿಸಿ ಉಳಿದ ಎಲ್ಲ ಆವೃತ್ತಿಗಳಲ್ಲೂ ಚೆನ್ನೈ ತಂಡದ ಪರವಾಗಿಯೇ ಆಡಿದ್ದಾರೆ.

2022ರ ಆವೃತ್ತಿಯಲ್ಲಿ ಧೋನಿ ತಮ್ಮ ನಾಯತ್ವ ತೊರೆದಿದ್ದರು. ಈ ವೇಳೆ ರವೀಂದ್ರ ಜಡೇಜಾ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಆದ್ರೆ ಸತತ ಸೋಲಿನಿಂದ ಬೇಸರಗೊಂಡ ರವೀಂದ್ರ ಜಡೇಜಾ, ಧೋನಿ ಅವರಿಗೆ ನಾಯಕ ಸ್ಥಾನವನ್ನು ಮರಳಿಸಿದ್ದರು. 2023ರ ಆವೃತ್ತಿಯಲ್ಲಿ ಮಹಿ ನಾಯಕತ್ವದಲ್ಲಿಯೇ ಚೆನ್ನೈ ತಂಡ 5ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು

Vishwa News 24

Recent Posts

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

8 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

24 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

3 hours ago