Featured

ಸಿಗಂದೂರು ಬ್ರಿಡ್ಜ್ ಲೋಕಾರ್ಪಣೆ – ಶಿಷ್ಠಾಚಾರ ಪಾಲನೆಯಾಗಿಲ್ಲ : ಸಿಎಂ ಆಕ್ರೋಶ – vishwanews24

ಸಿಗಂದೂರು ಸೇತುವೆ ಉದ್ಘಾಟನೆ: ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರ : ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕರ್ನಾಟಕದ ಅತಿದೊಡ್ಡ ಹಾಗೂ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆಯಾಗಿರುವ ಸಿಗಂದೂರು ಬ್ರಿಡ್ಜ್ ಲೋಕಾರ್ಪಣೆ ವಿಚಾರವಾಗಿ ಉಂಟಾಗಿರುವ ರಾಜಕೀಯ ವಿವಾದ ಈಗ ಮತ್ತಷ್ಟು ಜೋರಾಗುತ್ತಿದೆ.

ಉದ್ಘಾಟನೆ ಕಾರ್ಯಕ್ರಮಕ್ಕೆ ತಮ್ಮನ್ನು ವಿಳಂಬವಾಗಿ ಆಹ್ವಾನಿಸಲಾಗಿದ್ದು, ಪೂರ್ವನಿಗದಿತ ಕಾರ್ಯಕ್ರಮದ ಕಾರಣ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ದಿನಾಂಕ ಮುಂದೂಡಿ ಎಂದು ಮನವಿ ಮಾಡಿದ್ದರು. ಆದರೆ, ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿಲ್ಲ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಫೇಸ್​​ಬುಕ್​​ನಲ್ಲಿಯೂ ಅಸಮಾಧಾನ ತೋಡಿಕೊಂಡ ಸಿಎಂ, ಕೇಂದ್ರ ಸಚಿವರಿಗೆ ಬರೆದ ಪತ್ರವನ್ನು ಉಲ್ಲೇಖಿಸಿದ್ದರು.

ಈ ಕುರಿತ ಸಿಎಂ ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.

ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago