ಆನೇಕಲ್: ಸಿಗರೇಟ್ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್ನನ್ನ ಬಂಧಿಸಿರುವ ಘಟನೆ ನಡೆದಿದೆ.
ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್ ಅವರ ದೂರನ್ನ ಆಧರಿಸಿ ರಾಹುಲ್ನನ್ನ ಬಂಧಿಸಲಾಗಿದೆ.
ಬಂಧನಕ್ಕೆ ಕಾರಣ ಏನು?
2018 ರಲ್ಲಿ ವಾರ್ಡರ್ ಆಗಿ ಕಾರಾಗೃಹ ಇಲಾಖೆಗೆ ಸೇರ್ಪಡೆಯಾಗಿದ್ದ ರಾಹುಲ್ ಈ ಹಿಂದೆ ಬೆಳಗಾವಿ ಕಾರಾಗೃಹದಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸಕ್ತ ವರ್ಷದ ಜೂನ್ 29 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದರು.
ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದ ರಾಹುಲ್ ಶುಕ್ರವಾರ ಸಂಜೆ 6:50 ರ ಸುಮಾರಿಗೆ ಮಹಾದ್ವಾರದ ಬಳಿ ತಪಾಸಣೆಗೆ ಬಂದಿದ್ದರು. KSESF ಸಿಬ್ಬಂದಿ ತಪಾಸಣೆ ವೇಳೆ 2 ಸಿಗರೇಟ್ ಪ್ಯಾಕ್, 60 ಗ್ರಾಮ್ನಷ್ಟು ಮಾದಕ ವಸ್ತು ರೀತಿಯ ವಸ್ತು ಪತ್ತೆಯಾಗಿತ್ತು. ಸಿಬ್ಬಂದಿ ಕೂಡಲೇ ಈ ಮಾಹಿತಿಯನ್ನ ಜೈಲು ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಜೈಲು ಅಧೀಕ್ಷಕ ಪರಮೇಶ್ ಅವರು ನೀಡಿದ ದೂರನ್ನು ಆಧರಿಸಿ ರಾಹುಲ್ನನ್ನ ಬಂಧಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…