ಹುಬ್ಬಳ್ಳಿ: ಸಿಟಿ ರವಿ ಆ ರೀತಿ ಹೇಳಿಲ್ಲ ಎನ್ನುತ್ತಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದು ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುತ್ತಿರುವಾಗ ನಾವು ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದರು.
ಸಿ.ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸ್ಪೀಕರ್ ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನು ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ. ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದರು.
ಸಿಟಿ ರವಿ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಪ್ರಕರಣ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು. ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲಿಸುತ್ತಾರೆ. ಬೇರೆ ಯಾರೇ ಆದೇಶ ಮಾಡಿದರೂ ಅದನ್ನು ಪಾಲಿಸಲ್ಲ. ಅವರಿವರು ಆರೋಪ ಮಾಡುತ್ತಾರೆ ಎಂದು ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…