ಕಾಪು, : ಸಿಡಿಲು ಬಿಡಿದ ಪರಿಣಾಮ ಒಂದು ಕರು ಹಾಗೂ ಹಸುವೊಂದು ಮೃತಪಟ್ಟರೆ, ಇನ್ನೊಂದರ ಸ್ಥಿತಿ ಗಂಭೀರವಾಗಿರುವ ಘಟನೆ ಕಾಪುವಿನ ಪಡುಗ್ರಾಮದ ಲೈಟ್ ಹೌಸ್ ರೋಡ್ ನಲ್ಲಿ ಮಂಗಳವಾರ ನಡೆದಿದೆ.
ಇಲ್ಲಿನ ಲೈಟ್ ಹೌಸ್ ರೋಡ್ ನಿವಾಸಿ ಶಂಸುದ್ದೀನ್ ಎಂಬವರ ಮನೆಯಲ್ಲಿದ್ದ ಮೂರು ಗೋವುಗಳಿಗೆ ಸಿಡಿಲು ಬಡಿದಿದ್ದು ಇದರಲ್ಲಿ ಎರಡು ಹಸುಗಳು ಸಿಡಿಲು ಬಡಿತಕ್ಕೆ ಸಾವನ್ನಪ್ಪಿದ್ದರೆ, ಇನ್ನೊಂದು ಹಸು ಜೀವನ್ಮರಣ ಸ್ಥಿತಿಯಲ್ಲಿದೆ. ಮುಂಜಾವ ಸುರಿದ ಗಾಳಿ ಮಳೆ ಜೊತೆಗೆ ಸಿಡಿಲಿನ ಆಘಾತಕ್ಕೆ ಮನೆ ಹಿಂಬದಿಯಲ್ಲಿರುವ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಎರಡು ಗೋವುಗಳು ಮೃತಪಟ್ಟಿವೆ.
ಶಂಸುದ್ದೀನ್ ಅವರು ಕಳೆದ ಎಂಟು ವರುಷಗಳಿಂದ ಹೈನುಗಾರಿಕೆ ಮೂಲಕ ಹಾಲು ಮಾರಿ ಜೀವನ ನಡೆಸುತ್ತಾ ಬಂದಿದ್ದು, ಹಸುಗಳ ಸಾವಿನಿಂದ ಕಂಗಾಲಾಗಿದ್ದಾರೆ. ಸಿಡಿಲಿನ ಬಡಿತಕ್ಕೀಡಾದ ಎರಡು ಜೆರ್ಸಿ ಹಸುಗಳನ್ನು ಇತ್ತೀಚೆಗಷ್ಟೇ ಬ್ಯಾಂಕ್ ಸಾಲ ಪಡೆದು ಖರೀದಿಸಿದ್ದರು. ಇದರಲ್ಲಿ ಒಂದು ಹಸು ಮೃತಪಟ್ಟರೆ, ಇನ್ನೊಂದು ಜೀವನ್ಮರಣ ಸ್ಥಿತಿಯಲ್ಲಿದೆ. ಬಲಿಯಾದ ಕರುವೂ ಒಂದು ವರುಷ ಜೆರ್ಸಿ ಕರುವಾಗಿದೆ. ಸ್ಥಳೀಯ ಪುರಸಭೆ ಸದಸ್ಯೆ ಮಮತಾ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…