ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟೀಸ್ ನೀಡಿದ್ದು, ಆದರೆ ಅವರು ವಿಚಾರಣೆಗೆ ಗೈರಾಗಿದ್ದಾರೆ.
ರಮೇಶ್ ಜಾರಕಿಹೊಳಿ ಅವರನ್ನು ಶುಕ್ರವಾರ ಬೆಳಗ್ಗೆ ವಿಚಾರಣೆ ನಡೆಸಲು ಎಸ್ಐಟಿ ಸಿದ್ದವಾಗಿತ್ತು, ಆದರೆ, ರಮೇಶ್ ಜಾರಕಿಹೊಳಿ ಅವರು ಮಧ್ಯಾಹ್ನದವರೆಗೂ ವಿಚಾರಣೆಗೆ ಬರಲಿಲ್ಲ.
ಈ ಸಂಬಂಧ ರಮೇಶ್ ಜಾರಕಿಹೊಳಿ ಅವರು ತಮ್ಮ ವಕೀಲ ಶ್ಯಾಮ್ ಸುಂದರ್ ಅವರಿಗೆ ಪತ್ರ ನೀಡಿದ್ದು, “ನನಗೆ ವಿಪರೀತ ಜ್ವರ ಇದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದು, ವಿಶ್ರಾಂತಿ ಪಡೆದುಕೊಳ್ಳುವಂತೆ ವೈದ್ಯರು ಹೇಳಿದ್ದಾರೆ. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ” ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಎಸ್ಐಟಿ ಅಧಿಕಾರಿಗಳು ಪತ್ರವನ್ನು ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದು, ಮತ್ತೆ ವಿಚಾರಣೆ ನಡೆಸಲು ದಿನಾಂಕ ನಿಗದಿ ಮಾಡಿ ನೋಟಿಸ್ ನೀಡಬೇಕೋ ಅಥವಾ ಬೇರೆ ಕಾನೂನು ಕ್ರಮ ತೆಗೆದುಕೊಳ್ಳಬೇಕೋ ಎಂದು ಯೋಚಿಸುತ್ತಿದ್ದಾರೆ.
ದ. ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅಧಿಕಾರ ಸ್ವೀಕಾರ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…