Featured

ಸಿಡಿ ಪ್ರಕರಣ : ಇಂತಹ 10 ವೀಡಿಯೋ ಬರಲಿ ನಾನು ಹೆದರಲ್ಲ , ಕಾನೂನು ಹೋರಾಟ ನಡೆಸಿ ನಿರ್ದೋಷಿ ಆಗಿ ಬರುತ್ತೇನೆ : ರಮೇಶ್ ಜಾರಕಿಹೊಳಿ -Vishwanews24

ಸಿಡಿ ಪ್ರಕರಣ : ಇಂತಹ 10 ವೀಡಿಯೋ ಬರಲಿ ನಾನು ಹೆದರಲ್ಲ , ಕಾನೂನು ಹೋರಾಟ ನಡೆಸಿ ನಿರ್ದೋಷಿ ಆಗಿ ಬರುತ್ತೇನೆ : ರಮೇಶ್ ಜಾರಕಿಹೊಳಿ -Vishwanews24

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಎರಡನೇ ವೀಡಿಯೋ ಹೇಳಿಕೆ ಕುರಿತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಯುವತಿ ಯಾರದ್ದೋ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು, ಇಂತಹ 10 ವೀಡಿಯೋ ಬರಲಿ ನಾನು ಹೆದರಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಇದೊಂದು ದೊಡ್ಡ ಷಡ್ಯಂತ್ರವಾಗಿದ್ದು, ರಾಜಕೀಯವಾಗಿ ಎದುರಿಸಲು ಸಿದ್ಧನಿದ್ದೇನೆ. ನಾನು ದೂರು ನೀಡಿದ ಅರ್ಧ ಗಂಟೆ ನಂತ್ರ ವೀಡಿಯೋ ಬಂದಿರೋದು ಎಲ್ಲರಿಗೂ ಗೊತ್ತು. ಈ ರೀತಿಯ 10 ವೀಡಿಯೋಗಳು ಬಂದ್ರೂ ಎದುರಿಸುವ ಶಕ್ತಿ ನನ್ನಲಿದೆ ಎಂದರು.

ಇದನ್ನೂ ಓದಿ :ಸಿಡಿ ಪ್ರಕರಣ : ಯುವತಿಯ ಜೀವ ಹಾಗೂ ಮಾನ ರಕ್ಷಣೆಗೆ ಬದ್ಧನಾಗಿದ್ದೇನೆ : ರಮೇಶ್ ಕುಮಾರ್ -Vishwanews24

ಸಿಡಿ ಯುವತಿ ಮೊದಲ ಮತ್ತು ಎರಡನೇ ವೀಡಿಯೋದಲ್ಲಿ ಧ್ವನಿ ಹೇಗಿತ್ತು ಅನ್ನೋದನ್ನ ಗಮನಿಸಿ. ಸಮಯ ಬಂದಾಗ ನಾನು ನನ್ನ ಬಳಿ ಇರೋ ದಾಖಲಾತಿ ಬಿಡುಗಡೆ ಮಾಡ್ತೀನಿ. ಮೊನ್ನೆವರೆಗೂ ವಿಪಕ್ಷಗಳು ಹಾಗೂ ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರಗೌರವ ಇತ್ತು. ರೇಪ್ ಕೇಸ್ ಹಾಕಿ ಅಂತ ಹೇಳಿದಾಗ ನನಗೂ ಒಂದು ಕ್ಷಣ ಶಾಕ್ ಆಯ್ತು. ಯಾಕೆ ಅವರು ಹಾಗೆ ಹೇಳಿದ್ರೂ ಅನ್ನೋದು ಗೊತ್ತಿಲ್ಲ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಸದನದಲ್ಲಿ ಕಾಂಗ್ರೆಸ್ ಧರಣಿಗೆ ಅಸಮಾಧಾನ ಹೊರ ಹಾಕಿದರು.

ನಿರ್ದೋಷಿ ಆಗಿ ಬರುತ್ತೇನೆ: ನಾನು ಮಾತ್ರ ಯಾವುದೇ ತಪ್ಪು ಮಾಡಿಲ್ಲ. ಅವರನ್ನ ಜೈಲಿಗೆ ಕಳುಹಿಸದೇ ಬಿಡಲ್ಲ. ವೀಡಿಯೋದಲ್ಲಿ ಹೇಳುವ ಯುವತಿ ಪೊಲೀಸರ ಮುಂದೆ ಬಂದು ಹೇಳಲಿ. ಕಾಂಗ್ರೆಸ್ ನಾಯಕರ ಸಹಕಾರ ಕೇಳ್ತಾರೆ ಅಂದ್ರೆ ಇದರಲ್ಲಿರುವ ಷಡ್ಯಂತ್ರ ಅರ್ಥವಾಗಬೇಕಿದೆ. ನಾವು ಸಹ ಹಲವು ದಾಖಲೆ ಸಂಗ್ರಹಿಸಿದ್ದು, ಸದ್ಯ ನನ್ನ ಜೇಬಿನಲ್ಲಿರೋ ದಾಖಲೆ ತೋರಿಸಿದ್ರೆ ಎಲ್ಲರೂ ಶಾಕ್ ಆಗ್ತಾರೆ. ಮಹಾ ನಾಯಕನ ಬಗ್ಗೆ ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ. ಆದ್ರೆ ನಾನು ಕಾನೂನು ಹೋರಾಟ ನಡೆಸಿ ನಿರ್ದೋಷಿ ಆಗಿ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ಬ್ಯಾಂಕ್‌ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

7 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

7 hours ago