ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ 164 ಅಡಿಯಲ್ಲಿ ಹೇಳಿಕೆ ಕೊಟ್ಟಿದ್ದ ಯುವತಿ ಇದೀಗ ಮತ್ತೆ ಉಲ್ಟಾ ಹೊಡೆದಿದ್ದಾರೆ ಎಂಬ ಹೇಳಿಕೆಯನ್ನು ಯುವತಿ ಪರ ವಕೀಲರು ನಿರಾಕರಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಯುವತಿ ಪರ ವಕೀಲರಾದ ಸೂರ್ಯ ಮುಕುಂದರಾಜ್ ಈ ಸುದ್ದಿ ಕಪೋಲಕಲ್ಪಿತ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಡಿ ಪ್ರಕರಣದ ಸಂತ್ರಸ್ತೆ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಿ ಸ್ವ ಇಚ್ಚೆಯ ಹೇಳಿಕೆಯನ್ನು ನೀಡಿದ್ದರು. ಇದಾದ ಬಳಿಕ ಎಸ್ಐಟಿ ವಿಚಾರಣೆಗೂ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿದ್ದರು.ಈ ನಡುವೆ ಯುವತಿ ತಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ವಿರುದ್ಧವಾದ ಹೇಳಿಕೆಯನ್ನು ನೀಡಿದ್ದಾರೆ. ನನ್ನನ್ನು ಹನಿಟ್ರ್ಯಾಪ್ಗೆ ಬಳಕೆ ಮಾಡಲಾಗಿದೆ ಎಂದು ಯುವತಿ ಎಸ್ಐಟಿ ಮುಂದೆ ಹೇಳಿಕೆ ಕೊಟ್ಟಿದ್ದಾರೆ ಎಂದು ಸುದ್ದಿ ಹರಿಯಬಿಡಲಾಗಿತ್ತು.
ಸಿಡಿ ಪ್ರಕರಣ : ನನ್ನನ್ನು ‘ಹನಿಟ್ರ್ಯಾಪ್’ಗೆ ಬಳಿಸಿಕೊಂಡಿದ್ದರು ; ಅಧಿಕಾರಿಗಳ ಮುಂದೆ ಸಿಡಿ ಯುವತಿ ! Vishwanews24
ಆದರೆ ಈ ಸುದ್ದಿ ಕೇವಲ ಊಹಾಪೋಹ ಎಂದು ಯುವತಿ ಪರ ವಕೀಲರು ನಿರಾಕರಣೆ ಮಾಡಿದ್ದಾರೆ. ಯುವತಿ ಈ ರೀತಿಯ ಹೇಳಿಕೆ ಕೊಟ್ಟಿಲ್ಲ. ಈ ಸುದ್ದಿ ಸತ್ಯಕ್ಕೆ ದೂರವಾಗಿದೆ. ಯುವತಿಯಿಂದಲೂ ಸ್ಪಷ್ಟನೆ ಕೊಡಿಸಲು ಪ್ರಯತ್ನ ನಡೆಸಲಾಗುವುದು. ಯುವತಿ ತಾನು ಈ ಹಿಂದೆ ಕೊಟ್ಟ ಹೇಳಿಕೆಗೆ ಬದ್ಧಳಾಗಿದ್ದಾರೆ. ಆದರೂ ಯಾರು ಕಪೋಲಕಲ್ಪಿತ ಸುದ್ದಿಯನ್ನು ಹರಿಯಬಿಟ್ಟಿದ್ದಾರೆ ಗೊತ್ತಿಲ್ಲ ಎಂದು ಸೂರ್ಯ ಮುಕುಂದರಾಜ್ ಸ್ಪಷ್ಟಪಡಿಸಿದ್ದಾರೆ.
ಇನ್ನು ಮಾಧ್ಯಮಗಳ ಜೊತೆಗೆ ಮಾತನಾಡಿದ ಯುವತಿ ಪರ ವಕೀಲರಾದ ಜಗದೀಶ್ ಕುಮಾರ್ ಅವರೂ ಇದನ್ನು ಅಲ್ಲಗಳೆದಿದ್ದಾರೆ. ಯಾರು ಈ ಸುದ್ದಿಯನ್ನು ಹರಡುತ್ತಿದ್ದಾರೆ ಗೊತ್ತಿಲ್ಲ,ಆದರೆ ನ್ಯಾಯಾಲಯ ಗಮನಿಸುತ್ತಿದೆ, ಇಂತಹ ಊಹಾಪೋಹಗಳಿಗೆ ತಲೆಕೆಡಿಕೊಳ್ಳಬೆಕಾಗಿಲ್ಲ ಎಂದಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ಧ ಸಿ.ಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ಅತ್ಯಾಚಾರ ದೂರು ನೀಡಿದ್ದರು. ಯುವತಿಯ ದೂರಿನ ಆಧಾರದಲ್ಲಿ ರಮೇಶ್ ವಿರುದ್ಧ ಅತ್ಯಾಚಾರ ಆರೋಪ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಈ ಇನ್ನು ರಮೇಶ್ ಜಾರಕಿಹೊಳಿ ಕೋವಿಡ್ ಕಾರಣ ಒಡ್ಡಿ ಎಸ್ಐಟಿ ತನಿಖೆಗೆ ಹಾಜರಾಗಿಲ್ಲ
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…