ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ 164 ಅಡಿಯಲ್ಲಿ ಹೇಳಿಕೆ ಕೊಟ್ಟಿದ್ದ ಯುವತಿ ಇದೀಗ ಮತ್ತೆ ಉಲ್ಟಾ ಹೊಡೆದಿದ್ದಾರೆ ಎಂಬ ಹೇಳಿಕೆಯನ್ನು ಯುವತಿ ಪರ ವಕೀಲರು ನಿರಾಕರಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಯುವತಿ ಪರ ವಕೀಲರಾದ ಸೂರ್ಯ ಮುಕುಂದರಾಜ್ ಈ ಸುದ್ದಿ ಕಪೋಲಕಲ್ಪಿತ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಡಿ ಪ್ರಕರಣದ ಸಂತ್ರಸ್ತೆ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಿ ಸ್ವ ಇಚ್ಚೆಯ ಹೇಳಿಕೆಯನ್ನು ನೀಡಿದ್ದರು. ಇದಾದ ಬಳಿಕ ಎಸ್ಐಟಿ ವಿಚಾರಣೆಗೂ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿದ್ದರು.ಈ ನಡುವೆ ಯುವತಿ ತಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ವಿರುದ್ಧವಾದ ಹೇಳಿಕೆಯನ್ನು ನೀಡಿದ್ದಾರೆ. ನನ್ನನ್ನು ಹನಿಟ್ರ್ಯಾಪ್ಗೆ ಬಳಕೆ ಮಾಡಲಾಗಿದೆ ಎಂದು ಯುವತಿ ಎಸ್ಐಟಿ ಮುಂದೆ ಹೇಳಿಕೆ ಕೊಟ್ಟಿದ್ದಾರೆ ಎಂದು ಸುದ್ದಿ ಹರಿಯಬಿಡಲಾಗಿತ್ತು.
ಸಿಡಿ ಪ್ರಕರಣ : ನನ್ನನ್ನು ‘ಹನಿಟ್ರ್ಯಾಪ್’ಗೆ ಬಳಿಸಿಕೊಂಡಿದ್ದರು ; ಅಧಿಕಾರಿಗಳ ಮುಂದೆ ಸಿಡಿ ಯುವತಿ ! Vishwanews24
ಆದರೆ ಈ ಸುದ್ದಿ ಕೇವಲ ಊಹಾಪೋಹ ಎಂದು ಯುವತಿ ಪರ ವಕೀಲರು ನಿರಾಕರಣೆ ಮಾಡಿದ್ದಾರೆ. ಯುವತಿ ಈ ರೀತಿಯ ಹೇಳಿಕೆ ಕೊಟ್ಟಿಲ್ಲ. ಈ ಸುದ್ದಿ ಸತ್ಯಕ್ಕೆ ದೂರವಾಗಿದೆ. ಯುವತಿಯಿಂದಲೂ ಸ್ಪಷ್ಟನೆ ಕೊಡಿಸಲು ಪ್ರಯತ್ನ ನಡೆಸಲಾಗುವುದು. ಯುವತಿ ತಾನು ಈ ಹಿಂದೆ ಕೊಟ್ಟ ಹೇಳಿಕೆಗೆ ಬದ್ಧಳಾಗಿದ್ದಾರೆ. ಆದರೂ ಯಾರು ಕಪೋಲಕಲ್ಪಿತ ಸುದ್ದಿಯನ್ನು ಹರಿಯಬಿಟ್ಟಿದ್ದಾರೆ ಗೊತ್ತಿಲ್ಲ ಎಂದು ಸೂರ್ಯ ಮುಕುಂದರಾಜ್ ಸ್ಪಷ್ಟಪಡಿಸಿದ್ದಾರೆ.
ಇನ್ನು ಮಾಧ್ಯಮಗಳ ಜೊತೆಗೆ ಮಾತನಾಡಿದ ಯುವತಿ ಪರ ವಕೀಲರಾದ ಜಗದೀಶ್ ಕುಮಾರ್ ಅವರೂ ಇದನ್ನು ಅಲ್ಲಗಳೆದಿದ್ದಾರೆ. ಯಾರು ಈ ಸುದ್ದಿಯನ್ನು ಹರಡುತ್ತಿದ್ದಾರೆ ಗೊತ್ತಿಲ್ಲ,ಆದರೆ ನ್ಯಾಯಾಲಯ ಗಮನಿಸುತ್ತಿದೆ, ಇಂತಹ ಊಹಾಪೋಹಗಳಿಗೆ ತಲೆಕೆಡಿಕೊಳ್ಳಬೆಕಾಗಿಲ್ಲ ಎಂದಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ಧ ಸಿ.ಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ಅತ್ಯಾಚಾರ ದೂರು ನೀಡಿದ್ದರು. ಯುವತಿಯ ದೂರಿನ ಆಧಾರದಲ್ಲಿ ರಮೇಶ್ ವಿರುದ್ಧ ಅತ್ಯಾಚಾರ ಆರೋಪ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಈ ಇನ್ನು ರಮೇಶ್ ಜಾರಕಿಹೊಳಿ ಕೋವಿಡ್ ಕಾರಣ ಒಡ್ಡಿ ಎಸ್ಐಟಿ ತನಿಖೆಗೆ ಹಾಜರಾಗಿಲ್ಲ
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…