Featured

ಸಿಡಿ ಪ್ರಕರಣ : ಕಮಲ್‌ಪಂತ್ ಸೇರಿದಂತೆ 3 ಪೊಲೀಸ್ ಅಧಿಕಾರಿಗಳ ವಿರುದ್ದ ಖಾಸಗಿ ಮೊಕದ್ದಮೆ ದಾಖಲು -Vishwanews24

ಸಿಡಿ ಪ್ರಕರಣ : ಕಮಲ್‌ಪಂತ್ ಸೇರಿದಂತೆ 3 ಪೊಲೀಸ್ ಅಧಿಕಾರಿಗಳ ವಿರುದ್ದ ಖಾಸಗಿ ಮೊಕದ್ದಮೆ ದಾಖಲು -Vishwanews24

ಬೆಂಗಳೂರು,  : ರಮೇಶ್‌ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮೆಯೊಂದು ದಾಖಲಾಗಿದೆ.

ಜನಾಧಿಕಾರ ಸಂಘರ್ಷ ಪರಿಷತ್‌ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಈ ಖಾಸಗಿ ಮೊಕದ್ದಮೆ ಅರ್ಜಿ ಸಲ್ಲಿಸಿದೆ. ಸಿಡಿ ಪ್ರಕರಣದಲ್ಲಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ, ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರೂ ಈ ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಿಲ್ಲ ಎಂಬ ಆರೋಪದಲ್ಲಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ KSRTC ಬಸ್ ಸಂಚಾರ ಸ್ಥಗಿತ -Vishwanews24

ಮಾರ್ಚ್ 16 ರಂದು ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರು ರಮೇಶ ಜಾರಕಿಹೊಳಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ನೀಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಈ ದೂರಿನ ಆಧಾರದಲ್ಲಿ ಪೊಲೀಸ್ ಆಯುಕ್ತ ಕಮಲ್‌ಪಂತ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಹಾಗೂ ಕಬ್ಬನ್‌ ಪಾರ್ಕ್ ಠಾಣೆ ಇನ್‌ಸ್ಪೆಕ್ಟರ್ ಬಿ. ಮಾರುತಿ ಎಫ್‌ಐಆರ್ ದಾಖಲಿಸದೆ ದೂರು ನೀಡಿದ ದಿನೇಶ್ ಕಲ್ಲಹಳ್ಳಿಯನ್ನೇ ವಿಚಾರಣೆಗೆ ಒಳಪಡಿಸಿದ್ದರು ಎಂದು ಈ ಮೊಕದ್ದಮೆಯಲ್ಲಿ ದೂರಲಾಗಿದೆ. ನ್ಯಾಯಾಲಯವು ಈ ಮೊಕದ್ದಮೆಯನ್ನು ಅಂಗೀಕರಿಸಿದ್ದು ವಿಚಾರಣೆಯನ್ನು ಏಪ್ರಿಲ್ 16ಕ್ಕೆ ಮುಂದೂಡಿದೆ.

ಉಡುಪಿ: ಮುಷ್ಕರ ಹಿನ್ನೆಲೆ ರಸ್ತೆಗಿಳಿಯದ KSRTC ಬಸ್‌ಗಳು ; ಖಾಸಗಿ ಬಸ್‌ಗಳ ಮೊರೆ ಹೋದ ಪ್ರಯಾಣಿಕರು -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

2 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

2 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

3 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

5 hours ago