ಬೆಂಗಳೂರು,: ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ವಿಡಿಯೋದಲ್ಲಿದ್ದ ಸಂತ್ರಸ್ತೆ ಯುವತಿಯ ಮೂರನೇ ವಿಡಿಯೋ ರಿಲೀಸ್ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ, ನಿಜವಾಗಿ ಏನು ನಡೆದಿದೆ ಎಂದು ಹೇಳಿಕೆ ಕೊಡಲಿ. ಆಕೆ ಅಜ್ಞಾತ ಸ್ಥಳದಿಂದ ಹೊರಬರಲಿ. ಅಜ್ಞಾತವಾಸದಲ್ಲಿ ಇರುವ ಬದಲು ನಿಜವಾಗಿ ನಡೆದಿದ್ದು ಏನು? ಸತ್ಯ ಏನು? ಎಂದು ಹೇಳಲಿ. ತನಿಖೆಗೆ ಸಹಕರಿಸಲಿ ಎಂದು ಹೇಳಿದ್ದಾರೆ.
ಮೊದಲು ಸಂತ್ರಸ್ತ ಯುವತಿ ರಕ್ಷಣೆ ಕೇಳಿದ್ದರು. ಈಗ ಅವರ ತಂದೆ ತಾಯಿಗೆ ಭದ್ರತೆ ಬೇಕೆಂದು ಕೇಳುತ್ತಿದ್ದಾರೆ. ಅಂದರೆ, ಸರ್ಕಾರ ಇಲ್ಲಿಯವರೆಗೆ ಆಕೆಗೆ ಭದ್ರತೆ ಕೊಟ್ಟಿಲ್ಲ ಎಂದಾಯಿತು ಎಂದರು
ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24
ಇನ್ನು “ವಿಪಕ್ಷ ನಾಯಕ ಸಿದ್ದರಾಮಯ್ಯ ನನ್ನ ವಿರುದ್ಧ ರೇಪ್ ಕೇಸ್ ಹಾಕಬೇಕು ಎಂಬ ಹೇಳಿಕೆಯಿಂದ ಅವರ ಮೇಲೆ ನನಗಿದ್ದ ಗೌರವ ಕಡಿಮೆಯಾಗಿದೆ” ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ” ರಮೇಶ್ ಜಾರಕಿಹೊಳಿ ಆಣತಿಯಂತೆ ಮಾತನಾಡಲು ನನಗೆ ಆಗುವುದಿಲ್ಲ. ನಾನು ನಾನು ವಿರೋಧ ಪಕ್ಷದ ನಾಯಕ. ಎಂದಿಗೂ ಸತ್ಯವನ್ನೇ ಹೇಳಬೇಕಾಗುತ್ತದೆ . ಹಾಗೆಂದು ರಮೇಶ್ ಅವರ ಮೇಲೆ ನನಗೆ ಯಾವುದೇ ದ್ವೇಷವಿಲ್ಲ. ಅವರು ಎಂದಿಗೂ ನನಗೆ ಒಳ್ಳೆಯ ಸ್ನೇಹಿತ ಎಂದಿದ್ದಾರೆ.
ಇದನ್ನೂ ಓದಿ : ಮಂಗಳೂರು : ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿ ಹಣ ದೋಚಿದ್ದಆರೋಪಿಗಳ ಬಂಧನ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…