ಬೆಂಗಳೂರು,: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ , ಸಿಆರ್ಪಿಸಿ ಸೆಕ್ಷನ್ 164 ಅಡಿ ನ್ಯಾಯಾಧೀಶರ ಮುಂದೆ ದಾಖಲಿಸಿಕೊಳ್ಳಲಾದ ಯುವತಿ ನೀಡಿದ್ದ ಪ್ರಮಾಣೀಕೃತ ಹೇಳಿಕೆಯನ್ನು ರದ್ದುಗೊಳಿಸಬೇಕೆಂದು ಕೋರಿ ಆಕೆಯ ಪೋಷಕರು ಬುಧವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಒತ್ತಡದಲ್ಲಿ ತನ್ನ ಮಗಳು ಹೇಳಿಕೆ ನೀಡಿದ್ದು ಅದನ್ನು ಪರಿಗಣಿಸಬಾರದು. ಯಾವುದೋ ಒತ್ತಡ ಮತ್ತು ಪ್ರಭಾವದ ಕಾರಣಕ್ಕೆ ಮಗಳು ಈ ರೀತಿ ಹೇಳಿಕೆ ನೀಡಿದ್ದಾಳೆ. ಆಕೆ ಸ್ವಇಚ್ಛೆಯಿಂದ ಹೇಳಿಕೆ ನೀಡುವ ಸ್ಥಿತಿಯಲ್ಲಿ ಇಲ್ಲ. ಅಲ್ಲದೆ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರ ಉಪಸ್ಥಿತಿಯಲ್ಲಿ ಮಗಳ ಹೇಳಿಕೆ ದಾಖಲಾಗಿದೆ. ಕಾನೂನು ಪ್ರಕಾರ ಇದೊಂದು ಲೋಪ ಎಂದು ಕೂಡ ಮನವಿಯಲ್ಲಿ ತಿಳಿಸಲಾಗಿದೆ.
ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ -Vishwanews24
ರಾಜಕೀಯ ಮೇಲಾಟಕ್ಕೆ ನಾನು ನನ್ನ ಮಗಳು ಹಾಗೂ ಕುಟುಂಬ ಬಲಿಪಶುಗಳಾಗಿದ್ದೇವೆ. ಈ ಅರ್ಜಿ ಇತ್ಯರ್ಥವಾಗುವವರೆಗೂ ಮಗಳ ಹೇಳಿಕೆಯನ್ನು ಪರಿಗಣಿಸಿ ಯಾವುದೇ ಕ್ರಮ ಜರುಗಿಸದಂತೆ ತನಿಖಾಧಿಕಾರಿಗೆ ನಿರ್ದೇಶನ ನೀಡಬೇಕೆಂದು ಎಂದು ತಕರಾರು ಅರ್ಜಿಯಲ್ಲಿ ವಿನಂತಿಸಲಾಗಿದೆ.
ಅರ್ಜಿಯಲ್ಲಿ . ಗೃಹ ಇಲಾಖೆ, ಎಸ್ಐಟಿ ಹಾಗೂ ಕಬ್ಬನ್ಪಾರ್ಕ್ ಠಾಣೆಯ ಮೇಲಾಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…