ಬೆಂಗಳೂರು: ಎಸ್ಐಟಿ ಪೊಲೀಸರು ನೀಡಿದ ನಾಲ್ಕೈದು ನೋಟಿಸ್ಗಳಿಗೆ ಉತ್ತರಿಸದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣದ ಸಂತ್ರಸ್ತೆ ಮತ್ತೊಂದು ವಿಡಿಯೋ ತುಣುಕನ್ನು ಹರಿಯಬಿಟ್ಟಿದ್ದಾರೆ.
ಈ ವಿಡಿಯೋದಲ್ಲಿ “ನಮ್ಮ ತಂದೆ, ತಾಯಿ ಸ್ವಇಚ್ಛೆಯಿಂದ ದೂರು ನೀಡಿರಲ್ಲ. ನಾನು ತಪ್ಪೇ ಮಾಡಿಲ್ಲ ಎನ್ನುವುದು 100% ನಮ್ಮ ಪೋಷಕರಿಗೆ ಗೊತ್ತು. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅವರ ಸುರಕ್ಷತೆ ಬಗ್ಗೆ ನನಗೆ ನಂಬಿಕೆ ಬಂದರೆ ನಾನು ಎಸ್ಐಟಿ ನಾನು ಏನು ಹೇಳಿಕೆ ನೀಡಬೇಕೋ ಅದನ್ನು ನೀಡುತ್ತೇನೆ ಹಾಗೂ ವಿಚಾರಣೆಗೆ ಬರುತ್ತೇನೆ” ಎಂದು ವಿಡಿಯೋ ಹೇಳಿದ್ದಾರೆ.
ಇದನ್ನೂ ಓದಿ :ಕೋವಿಡ್ 2ನೇ ಅಲೆ : ಹೊಸ ಮಾರ್ಗ ಸೂಚಿ ಪ್ರಕಟ, ಮದುವೆಗೆ 200, ರಾಜಕೀಯ ಕಾರ್ಯಕ್ರಮಕ್ಕೆ– 500 ಮಂದಿಗೆ ಅವಕಾಶ -Vishwanews24
“ನನಗೆ ಕಳೆದ 2 ದಿನಗಳಿಂದ ನ್ಯಾಯ ಸಿಗುವ ಭರವಸೆಯಲ್ಲಿದ್ದೇನೆ. ಇದಲ್ಲದೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್ ಕುಮಾರ್, ಇತರ ಮಹಿಳಾ ಸಂಘಟನೆಗಳ ಬಳಿ ಕೇಳಿಕೊಳ್ಳುತ್ತಿದ್ದೇನೆ. ನಮ್ಮ ತಂದೆ, ತಾಯಿಗೆ ರಕ್ಷಣೆ ನೀಡಿ. ಅವರು ಸೇಫ್ ಎಂದು ತಿಳಿದ ತಕ್ಷಣ ಎಸ್ಐಟಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ”.
“ಈ ನಡುವೆ ನಾನು ಮಾರ್ಚ್ 12ರಂದೇ ನಗರ ಪೊಲೀಸ್ ಆಯುಕ್ತರಿಗೆ, ವಿಶೇಷ ತನಿಖಾ ತಂಡಕ್ಕೆ ವಿಡಿಯೋವನ್ನು ಕಳಿಸಿದ್ದೆ. ಆದರೆ ಆ ನಾನು ವಿಡಿಯೋ ನಾನು ಕಳಿಸಿದ್ದ ದಿನ ಬಿಡುಗಡೆ ಆಗಿಲ್ಲ. ಮಾ.13ರಂದು ರಮೇಶ್ ಜಾರಕಿಹೊಳಿರಿಂದ ದೂರು ನೀಡಿದ ಬಳಿಕ ಅರ್ಧ ಗಂಟೆಯ ಬಳಿಕ ವಿಡಿಯೋ ರಿಲೀಸ್ ಆಗಿದೆ. ಹೀಗಾಗಿ ಇಲ್ಲಿ ಏನಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ಎಸ್ಐಟಿಯವರು ಯಾರ ಪರವಾಗಿದ್ದಾರೆಂದು ಅರ್ಥವಾಗುತ್ತಿಲ್ಲ” ಎಂದು ಸಿಡಿ ಲೇಡಿ ಬಿಡುಗಡೆ ಮಾಡಿದ ಎರಡನೇ ವಿಡಿಯೋದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ : ಉಡುಪಿ: ಸಂಚಾರ ಪೋಲಿಸರಿಂದ ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಅಭಿಯಾನ -Vishwanews24
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…