ಬೆಂಗಳೂರು: ಎಸ್ಐಟಿ ಪೊಲೀಸರು ನೀಡಿದ ನಾಲ್ಕೈದು ನೋಟಿಸ್ಗಳಿಗೆ ಉತ್ತರಿಸದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣದ ಸಂತ್ರಸ್ತೆ ಮತ್ತೊಂದು ವಿಡಿಯೋ ತುಣುಕನ್ನು ಹರಿಯಬಿಟ್ಟಿದ್ದಾರೆ.
ಈ ವಿಡಿಯೋದಲ್ಲಿ “ನಮ್ಮ ತಂದೆ, ತಾಯಿ ಸ್ವಇಚ್ಛೆಯಿಂದ ದೂರು ನೀಡಿರಲ್ಲ. ನಾನು ತಪ್ಪೇ ಮಾಡಿಲ್ಲ ಎನ್ನುವುದು 100% ನಮ್ಮ ಪೋಷಕರಿಗೆ ಗೊತ್ತು. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅವರ ಸುರಕ್ಷತೆ ಬಗ್ಗೆ ನನಗೆ ನಂಬಿಕೆ ಬಂದರೆ ನಾನು ಎಸ್ಐಟಿ ನಾನು ಏನು ಹೇಳಿಕೆ ನೀಡಬೇಕೋ ಅದನ್ನು ನೀಡುತ್ತೇನೆ ಹಾಗೂ ವಿಚಾರಣೆಗೆ ಬರುತ್ತೇನೆ” ಎಂದು ವಿಡಿಯೋ ಹೇಳಿದ್ದಾರೆ.
ಇದನ್ನೂ ಓದಿ :ಕೋವಿಡ್ 2ನೇ ಅಲೆ : ಹೊಸ ಮಾರ್ಗ ಸೂಚಿ ಪ್ರಕಟ, ಮದುವೆಗೆ 200, ರಾಜಕೀಯ ಕಾರ್ಯಕ್ರಮಕ್ಕೆ– 500 ಮಂದಿಗೆ ಅವಕಾಶ -Vishwanews24
“ನನಗೆ ಕಳೆದ 2 ದಿನಗಳಿಂದ ನ್ಯಾಯ ಸಿಗುವ ಭರವಸೆಯಲ್ಲಿದ್ದೇನೆ. ಇದಲ್ಲದೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್ ಕುಮಾರ್, ಇತರ ಮಹಿಳಾ ಸಂಘಟನೆಗಳ ಬಳಿ ಕೇಳಿಕೊಳ್ಳುತ್ತಿದ್ದೇನೆ. ನಮ್ಮ ತಂದೆ, ತಾಯಿಗೆ ರಕ್ಷಣೆ ನೀಡಿ. ಅವರು ಸೇಫ್ ಎಂದು ತಿಳಿದ ತಕ್ಷಣ ಎಸ್ಐಟಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ”.
“ಈ ನಡುವೆ ನಾನು ಮಾರ್ಚ್ 12ರಂದೇ ನಗರ ಪೊಲೀಸ್ ಆಯುಕ್ತರಿಗೆ, ವಿಶೇಷ ತನಿಖಾ ತಂಡಕ್ಕೆ ವಿಡಿಯೋವನ್ನು ಕಳಿಸಿದ್ದೆ. ಆದರೆ ಆ ನಾನು ವಿಡಿಯೋ ನಾನು ಕಳಿಸಿದ್ದ ದಿನ ಬಿಡುಗಡೆ ಆಗಿಲ್ಲ. ಮಾ.13ರಂದು ರಮೇಶ್ ಜಾರಕಿಹೊಳಿರಿಂದ ದೂರು ನೀಡಿದ ಬಳಿಕ ಅರ್ಧ ಗಂಟೆಯ ಬಳಿಕ ವಿಡಿಯೋ ರಿಲೀಸ್ ಆಗಿದೆ. ಹೀಗಾಗಿ ಇಲ್ಲಿ ಏನಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ಎಸ್ಐಟಿಯವರು ಯಾರ ಪರವಾಗಿದ್ದಾರೆಂದು ಅರ್ಥವಾಗುತ್ತಿಲ್ಲ” ಎಂದು ಸಿಡಿ ಲೇಡಿ ಬಿಡುಗಡೆ ಮಾಡಿದ ಎರಡನೇ ವಿಡಿಯೋದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ : ಉಡುಪಿ: ಸಂಚಾರ ಪೋಲಿಸರಿಂದ ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಅಭಿಯಾನ -Vishwanews24
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…