Featured

ಸಿಡ್ನಿ: ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯದ ಆರೋನ್‌ ಫಿಂಚ್‌ – Vishwanews24

ಸಿಡ್ನಿ: ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ಆಸ್ಟ್ರೇಲಿಯದ ಆರೋನ್‌ ಫಿಂಚ್‌

ಸಿಡ್ನಿ: ಆಸ್ಟ್ರೇಲಿಯದ ಟಿ-20 ತಂಡದ ಕಪ್ತಾನ ಆರೋನ್‌ ಫಿಂಚ್‌ ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ.

ಕಳೆದ ವರ್ಷದ ಸೆಪ್ಟೆಂಬರ್‌ ನಲ್ಲಿ ಏಕದಿನ ಕ್ರಿಕೆಟ್‌ ಗೆ ವಿದಾಯ ಹೇಳಿದ್ದ ಫಿಂಚ್‌, ಮಂಗಳವಾರ ಟಿ-20 ಮಾದರಿಗೂ ನಿವೃತ್ತಿ ಘೋಷಿಸಿದ್ದಾರೆ.

2021 ರಲ್ಲಿ ಟಿ-20 ವಿಶ್ವಕಪ್‌ ಮುಡಿಗೇರಿಸಿಕೊಂಡ ಬಳಿಕ, 2022 ರಲ್ಲಿ ತವರಿನಲ್ಲಿ ನಡೆದ ಟಿ-20 ವಿಶ್ವಕಪ್‌ ನಲ್ಲಿ ಫಿಂಚ್‌ ನಾಯಕತ್ವದ ತಂಡ ಸೆಮಿ ಫೈನಲ್‌ ತಲುಪುವ ಮುನ್ನವೇ ಕೂಟದಿಂದ ಹೊರ ಬಿದ್ದಿತ್ತು.

2024 ರ ಟಿ-20 ವಿಶ್ವಕಪ್‌ ವರೆಗೆ ನಾನು ಆಡಲು ಆಗುವುದಿಲ್ಲ ಎನ್ನುವುದನ್ನು ಅರಿತುಕೊಂಡಿದ್ದೇನೆ. ಈ ಸಂದರ್ಭದಲ್ಲಿ ಕಪ್ತಾನ ಸ್ಥಾನದಿಂದ ಕೆಳಗಿಳಿದು, ತಂಡಕ್ಕೆ ಹೊಸ ಯೋಜನೆಗಳನ್ನು ರೂಪಿಸಲು ಹೆಚ್ಚು ಅವಕಾಶ ಕೊಡಲು ಸಹಕರಿವುದು ಇದು ಸರಿಯಾದ ಸಮಯ ಅನ್ನಿಸುತ್ತದೆ. ನನ್ನ ಪ್ರಕಾರ ಟಿ-20 ತಂಡ ಹೊಸ ಹಂತಕ್ಕೆ ಹೋಗಲು ಇದು ಸೂಕ್ತ ಸಮಯ. 2024 ರಲ್ಲಿ ವಿಶ್ವಕಪ್‌ ಇರಲಿದೆ. ತಂಡಕ್ಕೆ ಬರುವ ಹೊಸ ನಾಯಕ ತನ್ನ ಸಹಕಾರ, ಮಾರ್ಗದರ್ಶನವನ್ನು ನೀಡಿ ಅವರ ದಿಕ್ಕಿ ನಲ್ಲಿ ತಂಡವನ್ನು ಸಾಗಿಸಲು ಇದು ಸೂಕ್ತವಾದ ಸಂದರ್ಭವಾಗಿದೆ ಎಂದಿದ್ದಾರೆ.

ನನ್ನ 12 ವರ್ಷದ ಕ್ರಿಕೆಟ್‌ ಜರ್ನಿಯಲ್ಲಿ ನೂರಾರು ಅವಿಸ್ಮರಣೀಯ ನೆನಪುಗಳಿವೆ. ಹಲವರು ಸಿಹಿ ಕಹಿ ಅನುಭವಗಳಿವೆ. ನನ್ನ ಕುಟುಂಬ ಯಾವಾಗಲೂ ನನ್ನ ಬೆನ್ನ ಹಿಂದೆಯೇ ಇತ್ತು ಎಂದಿದ್ದಾರೆ.

2011 ರಲ್ಲಿ ಟಿ-20 ಕ್ರಿಕೆಟ್‌ ಗೆ ಇಂಗ್ಲೆಂಡ್‌ ವಿರುದ್ಧ ಪಾದಾರ್ಪಣೆ ಮಾಡಿದ್ದರು. 2 ಶತಕ,19 ಅರ್ಧ ಶತಕದೊಂದಿಗೆ 3120 ರನ್‌ ಗಳಿಸಿದ್ದಾರೆ. ಫಿಂಚ್‌ ಬಿಗ್‌ ಬ್ಯಾಷ್‌ ಲೀಗ್ ನ ಮೆಲ್ಬೋರ್ನ್ ರೆನೆಗೇಡ್ಸ್ ತಂಡದಲ್ಲಿ ಮುಂದುವರೆಯಲಿದ್ದಾರೆ

Vishwa News 24

Recent Posts

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

11 minutes ago

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…

24 minutes ago

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

19 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

20 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

20 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

20 hours ago