ತುಮಕೂರು: ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನ ದಾಸೋಹ ದಿನವನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಎರಡನೇ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಜನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಅವರು ಮಾಡಿರೋ ಸೇವೆ ಅನನ್ಯ. ಆಧುನಿಕ ಭಾರತದಲ್ಲಿ ಅವರು ಮಾಡಿದ ಸೇವೆ ವೇಳೆಯಲ್ಲಿ ನಾವಿರುವುದು ಧನ್ಯತಾ ಭಾವ. ಅದರ ಆಚರಣೆಯ ರೂಪುರೇಷಗಳನ್ನ ಸಿದ್ದಲಿಂಗ ಶ್ರೀಗಳ ಬಳಿ ಚರ್ಚಿಸಲಾಗುವುದು ಎಂದರು.
ರಾಜ್ಯಕ್ಕೆ ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಮೂರನೇ ಅಲೆ ಬಗ್ಗೆ ನಾವು ನಿಗಾ ವಹಿಸಿದ್ದೇವೆ. ಕಂಟೈನ್ಮೆಂಟ್ ಝೋನ್ ಮಾಡುವ ಮೂಲಕ ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತಿದ್ದೇವೆ. ಎಲ್ಲಾ ಸ್ಯಾಂಪಲ್ಗಳನ್ನು ಡೆಲ್ಟಾ ಅಥವಾ ಓಮಿಕ್ರಾನ್ ಎನ್ನುವುದನ್ನು ಖಾತ್ರಿಪಡಿಸಿಕೊಳ್ಳಲು ಕಳಿಸುತ್ತಿದ್ದೇವೆ. ವಿಮಾನ ನಿಲ್ದಾಣ ಹಾಗೂ ಕೇರಳದಿಂದ ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಶಾಲೆ, ಕಾಲೇಜುಗಳಲ್ಲೂ ಸಹ ಹೆಚ್ಚಿನ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…
ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…