ತುಮಕೂರು,: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ತುಮಕೂರಿನಲ್ಲಿ ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ.
ಶ್ರೀಗಳ ಆರೋಗ್ಯದ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಡಾ.ಪರಮೇಶ್ ಅವರು ಡಾ| ಶಿವಕುಮಾರ್ ಸ್ವಾಮೀಜಿಗಳ ಬಿ.ಪಿ ಏರುಪೇರಾಗುತ್ತಿದೆ. ಪ್ರೋಟೀನ್ ಅಂಶ ತುಂಬಾ ಕಡಿಮೆಯಾಗಿದೆ.ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಶ್ರೀಗಳಿಗಳಿಗೆ ನಿಶ್ಯಕ್ತಿ ಹೆಚ್ಚಾಗಿದ್ದು, ನಿನ್ನೆ ಆರ್ಯುವೇದಿಕ್ ಚಿಕಿತ್ಸೆ ನೀಡಲಾಗಿದೆ. ಈಗ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಶ್ರೀಗಳಿಗೆ ಚಿಕಿತ್ಸೆ ನೀಡಲು ಎಲ್ಲಾ ಪ್ರಯತ್ನ ನಡೆಸಲಾಗುತ್ತಿದೆ ಎಂದಿದ್ದಾರೆ.
ಇಂದು ಬೆಳಿಗ್ಗೆಯೇ ಶ್ರೀಗಳ ಉಸಿರಾಟದಲ್ಲಿ ಸ್ವಲ್ಪ ಏರುಪೇರು ಕಂಡಿತ್ತು. ಹೀಗಾಗಿ, ಸಿದ್ದಗಂಗಾ ಆಸ್ಪತ್ರೆ ವೈದ್ಯ ಡಾ. ಪರಮೇಶ್ ತಂಡದಿಂದ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ಸಿದ್ದಗಂಗಾ ಮಠದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಈಗಾಗಲೇ ಐಜಿಪಿ ನೀಲಮಣಿರಾಜು ಆದೇಶದಂತೆ ಭದ್ರತೆ ಹೆಚ್ಚಿಸಲಾಗಿದ್ದು, ಮೊದಲ ಹಂತದಲ್ಲಿ 2 ಸಾವಿರ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.
1500 ಗೃಹ ರಕ್ಷಕದಳ ಸಿಬ್ಬಂದಿ ನಿಯೋಜನೆಗೆ ಸೂಚನೆ ನೀಡಲಾಗಿದೆ. ಜಿಲ್ಲೆಗಳಿಂದ ಪೊಲೀಸರನ್ನು ಕರೆಸಿಕೊಳ್ಳಲು ಸೂಚಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…