Featured

ಸಿದ್ದಗಂಗಾ ಶ್ರೀ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ತುಮಕೂರು:ಸಿದ್ದಗಂಗಾ ಮಠದ ಶ್ರೀಗಳಾದ ಶತಾಯುಷಿ ಡಾ.ಶಿವಕುಮಾರ ಸ್ವಾಮಿಜಿಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು ಅವರನ್ನು ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೀಗಳಿಗೆ ಒಟ್ಟು 8 ಸ್ಟಂಟ್‌ಗಳನ್ನು ಅಳವಡಿಸಲಾಗಿದ್ದು ಸಾಮಾನ್ಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಶ್ರೀಗಳು ಲವಲವಿಕೆಯಿಂದ ಇದ್ದಾರೆ ಎಂದು ಮಠದ ಕಿರಿಯ ಶ್ರೀಗಳು ತಿಳಿಸಿದ್ದಾರೆ.

ಮುಂಜಾನೆ ಆಸ್ಪತ್ರೆಗೆ ಬಂದ ಶ್ರೀಗಳು ಕಾರು ಇಳಿದ ಬಳಿಕ ನಡೆದುಕೊಂಡೆ ಆಸ್ಪತ್ರೆ ಒಳಗೆ ತೆರಳಿದ್ದಾರೆ.  ಶ್ರೀಗಳಿಗೆ ರಕ್ತ ಪರೀಕ್ಷೆ ನಡೆಸಿ ವರದಿ ಬಂದ ಬಳಿಕ ಮಠಕ್ಕೆ ಕರೆದೊಯ್ಯಲಾಗುವ ಬಗ್ಗೆ ತಿರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ.

ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ತಪಾಸಣೆ ಪ್ರಾರಂಭವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕರೆದುಕೊಂಡು ಬಂದಿದ್ದೇವೆ ಅಂತ ಸಿದ್ದಗಂಗಾ ಮಠದ ಕಿರಿಯ ಶ್ರೀ ಗಳು ಹೇಳಿದ್ದಾರೆ. ಸ್ವಲ್ಪ ಆರೋಗ್ಯದಲ್ಲಿ ಏರುಪೇರು ಇತ್ತು. ಅದಕ್ಕಾಗಿ ಅವರನ್ನು ಕರೆದುಕೊಂಡು ಬಂದಿದ್ದೇವೆ. ಅವರು ಟೆಸ್ಟ್ ಗೂ ಒಪ್ಪಿಲ್ಲ. ಈಗ ಟೆಸ್ಟ್ ಗಳು ನಡೀತಾ ಇದೆ. ಒಟ್ಟು ಐದರಿಂದ ಆರು ವೈದ್ಯರುಗಳ ಟೀಮ್ ಅವರನ್ನು ನೋಡಿಕೊಳ್ಳುತ್ತಿದ್ದೇವೆ. ಸ್ಟಂಟ್ ಶಾಶ್ವತ ಅಲ್ಲ ಆರೇಳು ತಿಂಗಳು ಅಷ್ಟೆ ಬರೋದು. ಸ್ಟಂಟ್ ವ್ಯತ್ಯಾಸ ಕಂಡು ಬಂದಿರೋದ್ರಿಂದ ಅಲ್ಟ್ರಾಸೌಂಡ್ ಕೂಡ ಮಾಡಲಾಗುತ್ತೆ. ಈಗಾಗಲೇ ರಕ್ತ ಪರೀಕ್ಷೆ ಇಸಿಜಿಗಳನ್ನು ಮಾಡಲಾಗುತ್ತಿದೆ. ರಿಪೋರ್ಟ್ ಬಂದ ಮೇಲೆ ಆಸ್ಪತ್ರೆಗೆ ದಾಖಲಾಗುವ ಬಗ್ಗೆ ಹಾಗೂ ಮುಂದಿನ ಟ್ರೀಟ್ ಮೆಂಟ್ ಬಗ್ಗೆ ಚಿಂತನೆ ನಡೆಸಲಿದ್ದೇವೆ ಅಂರ ವೈದ್ಯ ಡಾ. ರವೀಂದ್ರ ಸ್ಪಷ್ಟಪಡಿಸಿದ್ದಾರೆ. 6 ಮಂದಿ ವೈದ್ಯರ ತಂಡ ಶ್ರೀಗಳ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago