Featured

ಸಿದ್ದರಾಮಯ್ಯನವರನ್ನು ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ : ದಿನೇಶ್ ಗುಂಡುರಾವ್ – Vishwanews24

ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ

ಬೆಂಗಳೂರು: ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದು, ಸಿದ್ದರಾಮಯ್ಯನವರನ್ನು ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಸಿದ್ದರಾಮಯ್ಯರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು?ಏನನ್ನು ತಿನ್ನಬಾರದು ಎಂದು ಬಿಜೆಪಿಯವರು ನಿರ್ಧರಿಸಬೇಕೆ?ನಮ್ಮ ಆಹಾರ, ನಮ್ಮ ಹಕ್ಕು.ಇದನ್ನು ಕೇಳಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವ ರ್ಯಾರು? ಊಟ ತನ್ನಿಚ್ಛೆ, ನೋಟ ಪರರಿಚ್ಛೆ ಅಲ್ಲವೇ.?” ಎಂದು ಪ್ರಶ್ನಿಸಿದ್ದಾರೆ.

“ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ.ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ?ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ.ಭಕ್ತಿ ಶುದ್ಧವಾಗಿರಬೇಕು “ಎಂದು ಹೇಳಿದ್ದಾರೆ.

ಭಟ್ಕಳ: ಬಾಲಕನ ಅಪಹರಣ ಪ್ರಕರಣ: ಮೂವರ ಬಂಧನ – Vishwanews24

ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ‌‌ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ.ಅದು ಅವರ ಆಹಾರ ಪದ್ದತಿ.ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. ಸಿ.ಟಿ ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು.ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ? ಎಂದಿದ್ದಾರೆ.

ಸಿದ್ದರಾಮಯ್ಯನವರನ್ನು ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ.ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ.ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ ಹೀಗೆ ಹೇಳುವ ತಾಕತ್ತು ಬಿಜೆಪಿಯವರಿಗಿದೆಯೇ? ಎಂದು ಸವಾಲ್ ಹಾಕಿದ್ದಾರೆ.

ಹೃದಯಾಘಾತದಿಂದ ನಟಿ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ನಿಧನ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago