ಮಂಗಳೂರು: ಸಿದ್ದರಾಮಯ್ಯನವರೇ, ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾನ್ಯ ಸಿದ್ದರಾಮಯ್ಯನವರೇ, ನೀವು ಅಂದು ಎಸ್ಡಿಪಿ, ಕೆಎಫ್ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.
ಆದರೆ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅಂತಹ ವಿಷಬೀಜಗಳನ್ನು ಸಮಾಜದಿಂದ ನಿರ್ಮೂಲನೆ ಮಾಡಲು, ಆ ಗಲಭೆಗಳಿಗೆ ಕಾರಣರಾದವರಿಂದಲೇ ನಷ್ಟ ಭರ್ತಿ ಮಾಡುವ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಆ ಮೂಲಕ ಸಮಾಜಘಾತುಕರ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಎಂದಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…