ಮಂಗಳೂರು: ಸಿದ್ದರಾಮಯ್ಯನವರೇ, ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾನ್ಯ ಸಿದ್ದರಾಮಯ್ಯನವರೇ, ನೀವು ಅಂದು ಎಸ್ಡಿಪಿ, ಕೆಎಫ್ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.
ಆದರೆ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅಂತಹ ವಿಷಬೀಜಗಳನ್ನು ಸಮಾಜದಿಂದ ನಿರ್ಮೂಲನೆ ಮಾಡಲು, ಆ ಗಲಭೆಗಳಿಗೆ ಕಾರಣರಾದವರಿಂದಲೇ ನಷ್ಟ ಭರ್ತಿ ಮಾಡುವ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಆ ಮೂಲಕ ಸಮಾಜಘಾತುಕರ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಎಂದಿದ್ದಾರೆ.
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…